Featured

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ : ಶೋಭಾ ಕರಂದ್ಲಾಂಜೆ – Vishwanews24

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ : ಶೋಭಾ ಕರಂದ್ಲಾಂಜೆ – Vishwanews24

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಶೋಭಾ ಕರಂದ್ಲಾಂಜೆ ಪ್ರಶ್ನಿಸಿದರು.

ಮತಾಂತರ ವಿರೋಧಿ ಮಸೂದೆಗೆ ಕಾಂಗ್ರೆಸ್ ಪಕ್ಷದಿಂದ ವಿರೋಧದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶೋಭಾ, “ಮತಾಂತರ ವಿರೋಧಿ ಕಾನೂನು ಈ ದೇಶದ ಜನರ ಆಶಯವಾಗಿದೆ. ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರ ಮತ ಬ್ಯಾಂಕ್‌ನಲ್ಲಿ ಕೇಂದ್ರೀಕೃತವಾಗಿದೆ. ಲವ್ ಜಿಹಾದ್, ಚಿಕಿತ್ಸೆ , ಬಡತನ ಎಂದು ದುರುಪಯೋಗ ಮಾಡಲಾಗುತ್ತಿದೆ. ಎಷ್ಟೋ ಬಡವರನ್ನು ಮತಾಂತರಿಸಿದ ಉದಾಹರಣೆಗಳಿವೆ. ಮಂಗಳೂರಿನಲ್ಲಿ ಬಲವಂತದ ಮತಾಂತರದಿಂದ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಜೀವಂತ ಉದಾಹಣೆಯಾಗಿದೆ. ಹೀಗಾಗಿ ಸಮಾಜದ ಶಾಂತಿ ಕಾಪಾಡಲು ಈ ಕಾನೂನು ಮುಖ್ಯವಾಗಿದೆ.

ಓಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಕಾಯ್ದೆ ವಿರೋಧಿಸುತ್ತಿದೆ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ನದ್ದು ಅಲ್ಪಸಂಖ್ಯಾತ ಓಟಲ್ಲಿ ಗೆಲ್ಲುವ ಪ್ಲ್ಯಾನ್. ಹಾಗಾದರೆ ನಿಮಗೆ ಬಹು ಸಂಖ್ಯಾತರ ಓಟ್ ಬೇಡವೇ? ಅಲ್ಪಸಂಖ್ಯಾತ ರ ಓಟಲ್ಲಿ ಗೆದ್ದು ಬರ್ತೀರಾ? ಅವರವರು ಅವರ ಧರ್ಮದಲ್ಲಿ ಇದ್ದರೆ ನಿಮಗೆ ಏನು ಸಮಸ್ಯೆ? ಎಂದು ಪ್ರಶ್ನಿಸಿದರು.

ಕರ್ನಾಟಕದ ಜನರು ಕಾಂಗ್ರೆಸ್ ನಾಯಕರ ಶುಭನುಡಿಗಳನ್ನು ಗಮನಿಸುತ್ತಿದ್ದಾರೆ. 2023 ರಲ್ಲಿ ಅಧಿಕಾರಕ್ಕೆ ಬಂದರೆ ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕುತ್ತೇವೆ ಎಂದು ಡಿಕೆಎಸ್ ಹೇಳಿಕೊಂಡಿದ್ದಾರೆ . ಆದರೆ ಕರ್ನಾಟಕದ ಜನತೆ ಅವರಿಗೆ ಅಧಿಕಾರ ನೀಡುತ್ತಾರೋ, ಇಲ್ಲವೋ ಎಂದು ಮೊದಲು ನೋಡಬೇಕು ಎಂದು ಲೇವಡಿ ಮಾಡಿದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago