Featured

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ : ಶೋಭಾ ಕರಂದ್ಲಾಂಜೆ – Vishwanews24

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ : ಶೋಭಾ ಕರಂದ್ಲಾಂಜೆ – Vishwanews24

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಶೋಭಾ ಕರಂದ್ಲಾಂಜೆ ಪ್ರಶ್ನಿಸಿದರು.

ಮತಾಂತರ ವಿರೋಧಿ ಮಸೂದೆಗೆ ಕಾಂಗ್ರೆಸ್ ಪಕ್ಷದಿಂದ ವಿರೋಧದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶೋಭಾ, “ಮತಾಂತರ ವಿರೋಧಿ ಕಾನೂನು ಈ ದೇಶದ ಜನರ ಆಶಯವಾಗಿದೆ. ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರ ಮತ ಬ್ಯಾಂಕ್‌ನಲ್ಲಿ ಕೇಂದ್ರೀಕೃತವಾಗಿದೆ. ಲವ್ ಜಿಹಾದ್, ಚಿಕಿತ್ಸೆ , ಬಡತನ ಎಂದು ದುರುಪಯೋಗ ಮಾಡಲಾಗುತ್ತಿದೆ. ಎಷ್ಟೋ ಬಡವರನ್ನು ಮತಾಂತರಿಸಿದ ಉದಾಹರಣೆಗಳಿವೆ. ಮಂಗಳೂರಿನಲ್ಲಿ ಬಲವಂತದ ಮತಾಂತರದಿಂದ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಜೀವಂತ ಉದಾಹಣೆಯಾಗಿದೆ. ಹೀಗಾಗಿ ಸಮಾಜದ ಶಾಂತಿ ಕಾಪಾಡಲು ಈ ಕಾನೂನು ಮುಖ್ಯವಾಗಿದೆ.

ಓಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಕಾಯ್ದೆ ವಿರೋಧಿಸುತ್ತಿದೆ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ನದ್ದು ಅಲ್ಪಸಂಖ್ಯಾತ ಓಟಲ್ಲಿ ಗೆಲ್ಲುವ ಪ್ಲ್ಯಾನ್. ಹಾಗಾದರೆ ನಿಮಗೆ ಬಹು ಸಂಖ್ಯಾತರ ಓಟ್ ಬೇಡವೇ? ಅಲ್ಪಸಂಖ್ಯಾತ ರ ಓಟಲ್ಲಿ ಗೆದ್ದು ಬರ್ತೀರಾ? ಅವರವರು ಅವರ ಧರ್ಮದಲ್ಲಿ ಇದ್ದರೆ ನಿಮಗೆ ಏನು ಸಮಸ್ಯೆ? ಎಂದು ಪ್ರಶ್ನಿಸಿದರು.

ಕರ್ನಾಟಕದ ಜನರು ಕಾಂಗ್ರೆಸ್ ನಾಯಕರ ಶುಭನುಡಿಗಳನ್ನು ಗಮನಿಸುತ್ತಿದ್ದಾರೆ. 2023 ರಲ್ಲಿ ಅಧಿಕಾರಕ್ಕೆ ಬಂದರೆ ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕುತ್ತೇವೆ ಎಂದು ಡಿಕೆಎಸ್ ಹೇಳಿಕೊಂಡಿದ್ದಾರೆ . ಆದರೆ ಕರ್ನಾಟಕದ ಜನತೆ ಅವರಿಗೆ ಅಧಿಕಾರ ನೀಡುತ್ತಾರೋ, ಇಲ್ಲವೋ ಎಂದು ಮೊದಲು ನೋಡಬೇಕು ಎಂದು ಲೇವಡಿ ಮಾಡಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

22 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago