Featured

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ : ಶೋಭಾ ಕರಂದ್ಲಾಂಜೆ – Vishwanews24

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ : ಶೋಭಾ ಕರಂದ್ಲಾಂಜೆ – Vishwanews24

ಕಾಪು : ಕಾಂಗ್ರೆಸ್ ಮತಾಂತರ ವಿರೋಧಿ ಮಸೂದೆಯನ್ನು ಏಕೆ ವಿರೋಧಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಶೋಭಾ ಕರಂದ್ಲಾಂಜೆ ಪ್ರಶ್ನಿಸಿದರು.

ಮತಾಂತರ ವಿರೋಧಿ ಮಸೂದೆಗೆ ಕಾಂಗ್ರೆಸ್ ಪಕ್ಷದಿಂದ ವಿರೋಧದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶೋಭಾ, “ಮತಾಂತರ ವಿರೋಧಿ ಕಾನೂನು ಈ ದೇಶದ ಜನರ ಆಶಯವಾಗಿದೆ. ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರ ಮತ ಬ್ಯಾಂಕ್‌ನಲ್ಲಿ ಕೇಂದ್ರೀಕೃತವಾಗಿದೆ. ಲವ್ ಜಿಹಾದ್, ಚಿಕಿತ್ಸೆ , ಬಡತನ ಎಂದು ದುರುಪಯೋಗ ಮಾಡಲಾಗುತ್ತಿದೆ. ಎಷ್ಟೋ ಬಡವರನ್ನು ಮತಾಂತರಿಸಿದ ಉದಾಹರಣೆಗಳಿವೆ. ಮಂಗಳೂರಿನಲ್ಲಿ ಬಲವಂತದ ಮತಾಂತರದಿಂದ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಜೀವಂತ ಉದಾಹಣೆಯಾಗಿದೆ. ಹೀಗಾಗಿ ಸಮಾಜದ ಶಾಂತಿ ಕಾಪಾಡಲು ಈ ಕಾನೂನು ಮುಖ್ಯವಾಗಿದೆ.

ಓಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಕಾಯ್ದೆ ವಿರೋಧಿಸುತ್ತಿದೆ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ನದ್ದು ಅಲ್ಪಸಂಖ್ಯಾತ ಓಟಲ್ಲಿ ಗೆಲ್ಲುವ ಪ್ಲ್ಯಾನ್. ಹಾಗಾದರೆ ನಿಮಗೆ ಬಹು ಸಂಖ್ಯಾತರ ಓಟ್ ಬೇಡವೇ? ಅಲ್ಪಸಂಖ್ಯಾತ ರ ಓಟಲ್ಲಿ ಗೆದ್ದು ಬರ್ತೀರಾ? ಅವರವರು ಅವರ ಧರ್ಮದಲ್ಲಿ ಇದ್ದರೆ ನಿಮಗೆ ಏನು ಸಮಸ್ಯೆ? ಎಂದು ಪ್ರಶ್ನಿಸಿದರು.

ಕರ್ನಾಟಕದ ಜನರು ಕಾಂಗ್ರೆಸ್ ನಾಯಕರ ಶುಭನುಡಿಗಳನ್ನು ಗಮನಿಸುತ್ತಿದ್ದಾರೆ. 2023 ರಲ್ಲಿ ಅಧಿಕಾರಕ್ಕೆ ಬಂದರೆ ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕುತ್ತೇವೆ ಎಂದು ಡಿಕೆಎಸ್ ಹೇಳಿಕೊಂಡಿದ್ದಾರೆ . ಆದರೆ ಕರ್ನಾಟಕದ ಜನತೆ ಅವರಿಗೆ ಅಧಿಕಾರ ನೀಡುತ್ತಾರೋ, ಇಲ್ಲವೋ ಎಂದು ಮೊದಲು ನೋಡಬೇಕು ಎಂದು ಲೇವಡಿ ಮಾಡಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

12 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

17 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

19 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

20 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

20 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

20 hours ago