ಬಿಜೆಪಿ ಪಕ್ಷವು ಪರಿಶಿಷ್ಟ ಜಾತಿಯ ಮಹಿಳೆಯನ್ನು ಕಾಪು ಪುರಸಭೆಯ ಉಪಾಧ್ಯಕ್ಷೆಯನ್ನಾಗಿಸಿರುವುದನ್ನು ಸಹಿಸದ ಕಾಂಗ್ರೆಸಿಗರಿಂದ ಅನಗತ್ಯ ಟೀಕೆ
ಎಸ್.ಡಿ.ಪಿ.ಐ ಪಕ್ಷವು ಕಾಂಗ್ರೆಸ್ನೊಂದಿಗೆ ಮಾತುಕತೆಯನ್ನು ನಡೆಸಿ ಹೊಂದಾಣಿಕ ಮಾಡಿಕೊಂಡು ಸರಿತಾ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಈ ಚುನಾವಣೆಯಲ್ಲಿ ಬೆಂಬಲಿಸುವಂತೆ ವಿಪ್ ನೋಟೀಸ್ ನೀಡಿರುತ್ತಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಒಪ್ಪದೆ ಎಸ್.ಡಿ.ಪಿ.ಐ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡಿ ಎಸ್.ಡಿ.ಪಿ.ಐ ಪಕ್ಷದಿಂದ ಹೊರಬಂದು ಬಿಜೆಪಿ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡ ನಂತರವೇ ಸರಿತಾರವರಿಗೆ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷ ಅವಕಾಶವನ್ನು ನೀಡಿರುವಂತಹದ್ದು ಇದು ಎಸ್.ಡಿ.ಪಿ.ಐ ನೊಂದಿಗೆ ಮೈತ್ರಿ .ಹೇಗಾಗುತ್ತದೆ?
ಸರಿತಾರವರು ಪುರಸಭಾ ಉಪಾಧ್ಯಕ್ಷೆಯಾದದ್ದು ಬಿಜೆಪಿ ಪಕ್ಷದ ಬೆಂಬಲಿತ ಪುರಸಭಾ ಸದಸ್ಯರ ಮತಗಳಿಂದ ಹೊರತು ಎಸ್.ಡಿ.ಪಿ.ಐ ಸದಸ್ಯರ ಮತಗಳಿಂದಲ್ಲ.
ಎಸ್.ಡಿ.ಪಿ.ಐ ಬೆಂಬಲಿತ ಇಬ್ಬರೂ ಪುರಸಭಾ ಸದಸ್ಯರ ಮತವನ್ನು ಪಡೆದದ್ದು ಕಾಂಗ್ರೆಸ್ ಅಭ್ಯರ್ಥಿ..
ಬಂಟ್ವಾಳದಲ್ಲಿ ನಡೆದ ಪುರಸಭಾ ಮೈತ್ರಿಯಂತೆ ಇಲ್ಲಿಯೂ ಕಾಂಗ್ರೆಸನ್ನು ಬೆಂಬಲಿಸಿತ್ತು ಎಸ್.ಡಿ.ಪಿ.ಐ ಪಕ್ಷ
ಒಂದೆಡೆ ಎಸ್.ಡಿ.ಪಿ.ಐ ಹಾಗೂ ಕಾಂಗ್ರೆಸ್ ನಡುವಿನ ಮೈತ್ರಿ ವಿಫಲವಾಯಿತೂ ಇನ್ನೊಂದೆಡೆಯಲ್ಲಿ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ತಂತ್ರಗಾರಿಕೆಯನ್ನರಿಯದೆ ಈ ಚುನಾವಣೆಯಲ್ಲಿ ಸೋತು ಮುಖಭಂಗಕ್ಕೀಡಾಯಿತು ಕಾಂಗ್ರೆಸ್
ಪರಿಶಿಷ್ಟ ಜಾತಿಯ ಮಹಿಳೆಗೆ ತನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಿ ಉಪಾಧ್ಯಕ್ಷ ಸ್ಥಾನವನ್ನು ನೀಡಿರುವ ಬಿಜೆಪಿ ಪಕ್ಷದ ನಿಲುವನ್ನು ಟೀಕಿಸುತ್ತಿರುವ ಕಾಂಗ್ರೆಸಿಗರೇ ನೀವು 7 ಸ್ಥಾನ ಹೊಂದಿದ್ದು ಎಸ್.ಡಿ.ಪಿ.ಐ ಇಬ್ಬರು ಸದಸ್ಯರ ಮತ ಸೇರಿ 9 ಮತ ಪಡೆದು ಸಾರ್ವಜನಿಕವಾಗಿ ಎಸ್.ಡಿ.ಪಿ.ಐ ಮತ್ತು ಕಾಂಗ್ರೆಸ್ ಮರೆಮಾಚಲು ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ವಿಷಾದನೀಯ..
ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಪಕ್ಷ ಮೈತ್ರಿ ಇದ್ದರೂ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ವಿಫಲವಾಗಿಯೂ ಸುಳ್ಳು ಸುದ್ದಿ ಹರಡುತ್ತಿರುವುದು ಖಂಡನೀಯ ಎಂದು ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…