ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಜತೆಗೂಡಿ ತೆಂಕ ಗ್ರಾಮ ಪಂಚಾಯತ್, ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ವಿವಿಧೆಡೆ ಮತ ಯಾಚಿಸಿದರು.
ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರಕಾರ ಮಾಡಿದ ಸಾಧನೆಗಳೇ ನಮಗೆ ಶ್ರೀರಕ್ಷೆಯಾಗಿದೆ. ಸರಕಾರ ಒದಗಿಸುತ್ತಿರುವ ಸವಲತ್ತುಗಳು ಅರ್ಹರನ್ನು ತಲುಪುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತರ ಶ್ರಮವೇ ಮುಖ್ಯ ಕಾರಣವಾಗಿದ್ದು ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಗಳಿಸುವಂತಾಗಲು ತಮಗೆ ಮತ ನೀಡುವಂತೆ ಮನವಿ ಮಾಡಿದರು.
ಎರ್ಮಾಳು ಜನಾರ್ದನ ದೇವಸ್ಥಾನ, ವೀರಭದ್ರ ದೇವಸ್ಥಾನ, ನಡಿಯಾಲು ಧೂಮಾವತಿ ದೈವಸ್ಥಾನವೂ ಸೇರಿದಂತೆ ವಿವಿದೆಡೆ ತೆರಳಿ ದೈವ – ದೇವರ ಆಶೀರ್ವಾದ ಪಡೆದರು.
ತೆಂಕ ಗ್ರಾ. ಪಂ. ಉಪಾಧ್ಯಕ್ಷೆ ಜಯಶ್ರೀ ಹರೀಶ್, ಪಡುಬಿದ್ರಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗಿತಾಂಜಲಿ ಎಂ. ಸುವರ್ಣ, ಚುನಾವಣಾ ಅಭ್ಯರ್ಥಿ ಪ್ರಮುಖ್ ಗಂಗಾಧರ್ ಸುವರ್ಣ, ಅನಿಲ್ ಕುಮಾರ್, ಮಾಜಿ ತಾ.ಪಂ. ಸದಸ್ಯ ಕೇಶವ ಮೊಯ್ಲಿ, ಪಕ್ಷದ ಪ್ರಮುಖರಾದ ಸತೀಶ್ ಸಾಲ್ಯಾನ್, ವಿನಯ ಶೆಟ್ಟಿ, ಧರ್ಮರಾಜ್, ಸಂತೋಷ್, ಅಮಣಿ, ಮನೋಜ್, ಧೀರಜ್, ಮೋಹನ್ ಸುವರ್ಣ, ವಿನೀತ್, ನಿತೇಶ್ ಕುಮಾರ್, ಪವನ್ ಎರ್ಮಾಳು, ಜಯೇಂದ್ರ, ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…