ಕಾಪು : ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು.
ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಶುಕ್ರವಾರ ಬೆಳಗ್ಗೆ ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ ಒಪ್ಪಿಸಿದ್ದಾರೆ.
ಈ ಸಂದರ್ಭ ಮಂಜುನಾಥ ಅವರು ಮಾತನಾಡಿ, ಸುಮಾರು ಐದು ವರ್ಷ ಪ್ರಾಯದ ಗಂಡು ನವಿಲು ಇದಾಗಿದ್ದು, ಸ್ಥಳೀಯರಾದ ಪ್ರಶಾಂತ್ ಹಾಗೂ ಶಿವನಂದ ರವರು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಾವು ಕಟಪಾಡಿಯ ಪಶು ವೈದ್ಯಾಧಿಕಾರಿಯವರಿಗೆ ತೋರಿಸಿ, ಅಲ್ಲಿ ನವಿಲಿಗೆ ಚಿಕಿತ್ಸೆ ನೀಡಿ, ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…