Featured

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.. -Vishwanews24

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.

ಕಾಪು: ನವಜಾತ ಹೆಣ್ಣು ಮಗುವಿಗೆ ಹುಟ್ಟಿನಿಂದಲೇ ಗುದದ್ವಾರ ಇಲ್ಲದೇ, ನಡೆಸಿರುವ ಶಸ್ತ್ರಚಿಕಿತ್ಸೆಯೂ ಯಶಸ್ವಿಯಾಗದೇ ಬಡ ಕುಟುಂಬವೊಂದು ಕಂಗಾಲಾಗಿದ್ದು ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಒಟ್ಟಾದ ಹಣವನ್ನು ಇಂದು ನೀಡಲಾಯಿತು…

ಕಾಪು ಕುತ್ಯಾರಿನ ಇರಂದಾಡಿಯಲ್ಲಿ ನೆಲೆಸಿರುವ ರವಿ ಕುಲಾಲ್ – ಶೋಭಾ ಕುಲಾಲ್ ದಂಪತಿಯ 9 ತಿಂಗಳ ಲಕ್ಷ್ಯ ಎಂಬ ಹೆಣ್ಣು ಮಗು ಗುದದ್ವಾರ ಇಲ್ಲದೇ ಜನಿಸಿದೆ. ಅಪರೂಪದ ಪ್ರಕರಣವನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸುವಂತೆ ವೈದ್ಯರು ತಿಳಿಸಿದ್ದರು. ಅದರಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇದನ್ನು ಶಸ್ತ್ರಕ್ರಿಯೆ ಮೂಲಕ ಸರಿಪಡಿಸುವ ಭರವಸೆ ನೀಡಲಾಗಿತ್ತು. ಅದರಂತೆ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಮೊದಲು ಮೂತ್ರಕೋಶದ ಬಳಿ ರಂಧ್ರ ಮಾಡಲಾಯಿತು. ಅದು ಫಲಕಾರಿಯಾಗಲಿಲ್ಲ. ಬಳಿಕ ಹೊಟ್ಟೆ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದೀಗ ಅದೂ ಯಶಸ್ವಿಯಾಗದೇ ರವಿ ಕುಟುಂಬ ಬಹಳಷ್ಟು ತೊಂದರೆ, ನೋವು ಅನುಭವಿಸಿದೆ.

ಇದೀಗ ಇನ್ನೊಂದು ಶಸ್ತ್ರಚಿಕಿತ್ಸೆ ನಡೆಸಬೇಕಾಗಿದ್ದು, ಅದಕ್ಕಾಗಿ ಮಗುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂದಿನ ಚಿಕಿತ್ಸೆಗೆ ಒಂದು ಲಕ್ಷಕ್ಕೂ ಅಧಿಕ ರೂಪಾಯಿ ವೆಚ್ಚವಾಗಬಹುದೆಂದು ವೈದ್ಯರು ತಿಳಿಸಿದ್ದು, ಬಡ ಕುಟುಂಬಕ್ಕೆ ಇಷ್ಟು ಹಣ ಹೊಂದಿಸುವ ಶಕ್ತಿ ಇಲ್ಲ. ಮೇಸ್ತ್ರಿ ಕೆಲಸ ಮಾಡುವ ರವಿ ಕುಲಾಲ್, ಬೀಡಿ ಕಾರ್ಮಿಕರಾಗಿರುವ ಶೋಭಾ ಅವರ ಮಗುವಿನ ಚಿಕಿತ್ಸೆಗೆ ದಾನಿಗಳಿಂದ ಒಟ್ಟಾದ ರೂ 29,900 ನ್ನು ಮಗುವಿನ ಪೋಷಕರಿಗೆ ಹಸ್ತಾಂತರಿಸಲಾಯಿತು..

ಹಣ ಹಸ್ತಾಂತರ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಉದಯ ಕುಲಾಲ್ ಕಳತ್ತೂರು, ವಕೀಲರು ಸುನಿಲ್ ಎಸ್ ಮೂಲ್ಯ, ಶಂಕರ್ ಕುಲಾಲ್ ಇರಂದಾಡಿ, ಕಾಪು ಕುಲಾಲ ಸಂಘದ ಅಧ್ಯಕ್ಷರು ರಾಜೇಶ್ ಕುಲಾಲ್ ಬೊಬ್ಬೆಟ್ಟು,ಉಪಾಧ್ಯಕ್ಷರು ಸಂದೀಪ್ ಬಂಗೇರ ಶಂಕರಪುರ,ಪ್ರಧಾನ ಕಾರ್ಯದರ್ಶಿ ಸುರೇಶ್ ಕುಲಾಲ್ ಕೆಮುಂಡೇಲು , ಸುರೇಶ್ ಡಿ ಕುಲಾಲ್ ಇನ್ನ, ಯೋಗೀಶ್ ಕುಲಾಲ್ ಉಳ್ಳೂರು,ರವಿರಾಜ್ ಆಚಾರ್ಯ ಕುಕ್ಕುಂಜ,ಶಶಿಧರ್ ಕುಲಾಲ್,,ದಿನೇಶ್ ಕುಲಾಲ್ ಮಲಂಗೋಳಿ ಉಪಸ್ಥಿತರಿದ್ದರು..

ಆ ಮಗುವಿಗೆ ನೆರವು ನೀಡುವವರ ಗಮನಕ್ಕೆ.

ಬ್ಯಾಂಕ್ ಮಾಹಿತಿ.
ವಿಜಯ ಬ್ಯಾಂಕ್ ಕಳತ್ತೂರು
ಅಕೌಂಟ್ ನಂಬರ್–110401010003634
IFSC CODE- VIJBOOO21O4
Mobil number -9632298741

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago