Featured

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.. -Vishwanews24

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.

ಕಾಪು: ನವಜಾತ ಹೆಣ್ಣು ಮಗುವಿಗೆ ಹುಟ್ಟಿನಿಂದಲೇ ಗುದದ್ವಾರ ಇಲ್ಲದೇ, ನಡೆಸಿರುವ ಶಸ್ತ್ರಚಿಕಿತ್ಸೆಯೂ ಯಶಸ್ವಿಯಾಗದೇ ಬಡ ಕುಟುಂಬವೊಂದು ಕಂಗಾಲಾಗಿದ್ದು ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಒಟ್ಟಾದ ಹಣವನ್ನು ಇಂದು ನೀಡಲಾಯಿತು…

ಕಾಪು ಕುತ್ಯಾರಿನ ಇರಂದಾಡಿಯಲ್ಲಿ ನೆಲೆಸಿರುವ ರವಿ ಕುಲಾಲ್ – ಶೋಭಾ ಕುಲಾಲ್ ದಂಪತಿಯ 9 ತಿಂಗಳ ಲಕ್ಷ್ಯ ಎಂಬ ಹೆಣ್ಣು ಮಗು ಗುದದ್ವಾರ ಇಲ್ಲದೇ ಜನಿಸಿದೆ. ಅಪರೂಪದ ಪ್ರಕರಣವನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸುವಂತೆ ವೈದ್ಯರು ತಿಳಿಸಿದ್ದರು. ಅದರಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇದನ್ನು ಶಸ್ತ್ರಕ್ರಿಯೆ ಮೂಲಕ ಸರಿಪಡಿಸುವ ಭರವಸೆ ನೀಡಲಾಗಿತ್ತು. ಅದರಂತೆ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಮೊದಲು ಮೂತ್ರಕೋಶದ ಬಳಿ ರಂಧ್ರ ಮಾಡಲಾಯಿತು. ಅದು ಫಲಕಾರಿಯಾಗಲಿಲ್ಲ. ಬಳಿಕ ಹೊಟ್ಟೆ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದೀಗ ಅದೂ ಯಶಸ್ವಿಯಾಗದೇ ರವಿ ಕುಟುಂಬ ಬಹಳಷ್ಟು ತೊಂದರೆ, ನೋವು ಅನುಭವಿಸಿದೆ.

ಇದೀಗ ಇನ್ನೊಂದು ಶಸ್ತ್ರಚಿಕಿತ್ಸೆ ನಡೆಸಬೇಕಾಗಿದ್ದು, ಅದಕ್ಕಾಗಿ ಮಗುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂದಿನ ಚಿಕಿತ್ಸೆಗೆ ಒಂದು ಲಕ್ಷಕ್ಕೂ ಅಧಿಕ ರೂಪಾಯಿ ವೆಚ್ಚವಾಗಬಹುದೆಂದು ವೈದ್ಯರು ತಿಳಿಸಿದ್ದು, ಬಡ ಕುಟುಂಬಕ್ಕೆ ಇಷ್ಟು ಹಣ ಹೊಂದಿಸುವ ಶಕ್ತಿ ಇಲ್ಲ. ಮೇಸ್ತ್ರಿ ಕೆಲಸ ಮಾಡುವ ರವಿ ಕುಲಾಲ್, ಬೀಡಿ ಕಾರ್ಮಿಕರಾಗಿರುವ ಶೋಭಾ ಅವರ ಮಗುವಿನ ಚಿಕಿತ್ಸೆಗೆ ದಾನಿಗಳಿಂದ ಒಟ್ಟಾದ ರೂ 29,900 ನ್ನು ಮಗುವಿನ ಪೋಷಕರಿಗೆ ಹಸ್ತಾಂತರಿಸಲಾಯಿತು..

ಹಣ ಹಸ್ತಾಂತರ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಉದಯ ಕುಲಾಲ್ ಕಳತ್ತೂರು, ವಕೀಲರು ಸುನಿಲ್ ಎಸ್ ಮೂಲ್ಯ, ಶಂಕರ್ ಕುಲಾಲ್ ಇರಂದಾಡಿ, ಕಾಪು ಕುಲಾಲ ಸಂಘದ ಅಧ್ಯಕ್ಷರು ರಾಜೇಶ್ ಕುಲಾಲ್ ಬೊಬ್ಬೆಟ್ಟು,ಉಪಾಧ್ಯಕ್ಷರು ಸಂದೀಪ್ ಬಂಗೇರ ಶಂಕರಪುರ,ಪ್ರಧಾನ ಕಾರ್ಯದರ್ಶಿ ಸುರೇಶ್ ಕುಲಾಲ್ ಕೆಮುಂಡೇಲು , ಸುರೇಶ್ ಡಿ ಕುಲಾಲ್ ಇನ್ನ, ಯೋಗೀಶ್ ಕುಲಾಲ್ ಉಳ್ಳೂರು,ರವಿರಾಜ್ ಆಚಾರ್ಯ ಕುಕ್ಕುಂಜ,ಶಶಿಧರ್ ಕುಲಾಲ್,,ದಿನೇಶ್ ಕುಲಾಲ್ ಮಲಂಗೋಳಿ ಉಪಸ್ಥಿತರಿದ್ದರು..

ಆ ಮಗುವಿಗೆ ನೆರವು ನೀಡುವವರ ಗಮನಕ್ಕೆ.

ಬ್ಯಾಂಕ್ ಮಾಹಿತಿ.
ವಿಜಯ ಬ್ಯಾಂಕ್ ಕಳತ್ತೂರು
ಅಕೌಂಟ್ ನಂಬರ್–110401010003634
IFSC CODE- VIJBOOO21O4
Mobil number -9632298741

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

13 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago