Featured

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.. -Vishwanews24

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.

ಕಾಪು: ನವಜಾತ ಹೆಣ್ಣು ಮಗುವಿಗೆ ಹುಟ್ಟಿನಿಂದಲೇ ಗುದದ್ವಾರ ಇಲ್ಲದೇ, ನಡೆಸಿರುವ ಶಸ್ತ್ರಚಿಕಿತ್ಸೆಯೂ ಯಶಸ್ವಿಯಾಗದೇ ಬಡ ಕುಟುಂಬವೊಂದು ಕಂಗಾಲಾಗಿದ್ದು ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಒಟ್ಟಾದ ಹಣವನ್ನು ಇಂದು ನೀಡಲಾಯಿತು…

ಕಾಪು ಕುತ್ಯಾರಿನ ಇರಂದಾಡಿಯಲ್ಲಿ ನೆಲೆಸಿರುವ ರವಿ ಕುಲಾಲ್ – ಶೋಭಾ ಕುಲಾಲ್ ದಂಪತಿಯ 9 ತಿಂಗಳ ಲಕ್ಷ್ಯ ಎಂಬ ಹೆಣ್ಣು ಮಗು ಗುದದ್ವಾರ ಇಲ್ಲದೇ ಜನಿಸಿದೆ. ಅಪರೂಪದ ಪ್ರಕರಣವನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸುವಂತೆ ವೈದ್ಯರು ತಿಳಿಸಿದ್ದರು. ಅದರಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇದನ್ನು ಶಸ್ತ್ರಕ್ರಿಯೆ ಮೂಲಕ ಸರಿಪಡಿಸುವ ಭರವಸೆ ನೀಡಲಾಗಿತ್ತು. ಅದರಂತೆ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಮೊದಲು ಮೂತ್ರಕೋಶದ ಬಳಿ ರಂಧ್ರ ಮಾಡಲಾಯಿತು. ಅದು ಫಲಕಾರಿಯಾಗಲಿಲ್ಲ. ಬಳಿಕ ಹೊಟ್ಟೆ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದೀಗ ಅದೂ ಯಶಸ್ವಿಯಾಗದೇ ರವಿ ಕುಟುಂಬ ಬಹಳಷ್ಟು ತೊಂದರೆ, ನೋವು ಅನುಭವಿಸಿದೆ.

ಇದೀಗ ಇನ್ನೊಂದು ಶಸ್ತ್ರಚಿಕಿತ್ಸೆ ನಡೆಸಬೇಕಾಗಿದ್ದು, ಅದಕ್ಕಾಗಿ ಮಗುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂದಿನ ಚಿಕಿತ್ಸೆಗೆ ಒಂದು ಲಕ್ಷಕ್ಕೂ ಅಧಿಕ ರೂಪಾಯಿ ವೆಚ್ಚವಾಗಬಹುದೆಂದು ವೈದ್ಯರು ತಿಳಿಸಿದ್ದು, ಬಡ ಕುಟುಂಬಕ್ಕೆ ಇಷ್ಟು ಹಣ ಹೊಂದಿಸುವ ಶಕ್ತಿ ಇಲ್ಲ. ಮೇಸ್ತ್ರಿ ಕೆಲಸ ಮಾಡುವ ರವಿ ಕುಲಾಲ್, ಬೀಡಿ ಕಾರ್ಮಿಕರಾಗಿರುವ ಶೋಭಾ ಅವರ ಮಗುವಿನ ಚಿಕಿತ್ಸೆಗೆ ದಾನಿಗಳಿಂದ ಒಟ್ಟಾದ ರೂ 29,900 ನ್ನು ಮಗುವಿನ ಪೋಷಕರಿಗೆ ಹಸ್ತಾಂತರಿಸಲಾಯಿತು..

ಹಣ ಹಸ್ತಾಂತರ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಉದಯ ಕುಲಾಲ್ ಕಳತ್ತೂರು, ವಕೀಲರು ಸುನಿಲ್ ಎಸ್ ಮೂಲ್ಯ, ಶಂಕರ್ ಕುಲಾಲ್ ಇರಂದಾಡಿ, ಕಾಪು ಕುಲಾಲ ಸಂಘದ ಅಧ್ಯಕ್ಷರು ರಾಜೇಶ್ ಕುಲಾಲ್ ಬೊಬ್ಬೆಟ್ಟು,ಉಪಾಧ್ಯಕ್ಷರು ಸಂದೀಪ್ ಬಂಗೇರ ಶಂಕರಪುರ,ಪ್ರಧಾನ ಕಾರ್ಯದರ್ಶಿ ಸುರೇಶ್ ಕುಲಾಲ್ ಕೆಮುಂಡೇಲು , ಸುರೇಶ್ ಡಿ ಕುಲಾಲ್ ಇನ್ನ, ಯೋಗೀಶ್ ಕುಲಾಲ್ ಉಳ್ಳೂರು,ರವಿರಾಜ್ ಆಚಾರ್ಯ ಕುಕ್ಕುಂಜ,ಶಶಿಧರ್ ಕುಲಾಲ್,,ದಿನೇಶ್ ಕುಲಾಲ್ ಮಲಂಗೋಳಿ ಉಪಸ್ಥಿತರಿದ್ದರು..

ಆ ಮಗುವಿಗೆ ನೆರವು ನೀಡುವವರ ಗಮನಕ್ಕೆ.

ಬ್ಯಾಂಕ್ ಮಾಹಿತಿ.
ವಿಜಯ ಬ್ಯಾಂಕ್ ಕಳತ್ತೂರು
ಅಕೌಂಟ್ ನಂಬರ್–110401010003634
IFSC CODE- VIJBOOO21O4
Mobil number -9632298741

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

2 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

2 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

2 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

2 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

2 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

2 days ago