ಕಾಪು : ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 6.19 ಲ.ರೂ. ನಗದು ಅಕ್ರಮವಾಗಿ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಏ.24 ರಂದು ಸೀತಮ್ಮ ಎಂಬವರು ತಮ್ಮ ಮನೆಯಲ್ಲಿ ಇದ್ದ ವೇಳೆ ತಮ್ಮ ಹಾಗೂ ತಮ್ಮ ಪತಿಯ ಮೊಬೈಲ್ ನಂಬರಿಗೆ ಬ್ಯಾಂಕ್ ಎಕೌಂಟ್ ಹೋಲ್ಡ್ ಆಗಿದ್ದು ಕೆವೈಸಿ ಅಪ್ಡೇಟ್ ಮಾಡುವ ಬಗ್ಗೆ ಕರೆ ಮಾಡುವಂತೆ ನಂಬರ್ ನ್ನು ಸೂಚಿಸಲಾಯಿತು. ಇದನ್ನು ನಂಬಿದ ಸೀತಮ್ಮ ಅವರು ಮೆಸೇಜ್ನಲ್ಲಿ ಸೂಚಿಸಿದಂತೆ ಆ ನಂಬರಿಗೆ ಕರೆ ಮಾಡಿದಾಗ ಆರೋಪಿಗಳು ಸೂಚಿಸಿದಂತೆ ಓಟಿಪಿಗಳನ್ನು ನೀಡಿರುತ್ತಾರೆ. ಬಳಿಕ ಅನುಮಾನಗೊಂಡು ಮೆಸೇಜ್ಗಳನ್ನು ಪರಿಶೀಲಿಸಿದಾಗ ತಮ್ಮ ಬ್ಯಾಂಕ್ ಖಾತೆಯಿಂದ 6,19,000 ರೂ. ಕಟಾವು ಆಗಿರುವುದು ತಿಳಿದು ಬಂದಿದ್ದು ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…