Featured

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು  ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫ‌ಲ: ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ – vishwanews24

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು  ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫ‌ಲ: ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆಗಳು ವಿಫಲವಾಗುತ್ತಿವೆ. ಅಧಿಕಾರಿಗಳು ಕಾರ್ಯಕ್ರಮಗಳ ಬಗ್ಗೆ ಪ್ರಚಾರಗೊಳಿಸಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದರು.

ಕಾಪು ಪುರಸಭಾ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರೀ ಮಳೆಯಿಂದಾಗಿ ಕಾಪು ತಾಲೂಕಿನಲ್ಲಿ ಸುಮಾರು 20 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು 11 ಗ್ರಾಮಗಳ 54 ಜನ ರೈತರ ಬೆಳೆ ನಷ್ಟವಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಸರ್ವೆ ನಡೆಸಿ ವರದಿ ನೀಡುವ ಅಗತ್ಯವಿದೆ. ಕಾಪು ತಾಲೂಕು ಆಸ್ಪತ್ರೆ ನಿರ್ಮಾಣದ ಬಗ್ಗೆ ಅಗತ್ಯ ನಿವೇಶನ ಗುರುತಿಸುವಂತೆ ಮತ್ತು ಡೆಂಗ್ಯೂ ಹರಡದ ಹಾಗೆ ತಡೆಗಟ್ಟುವಿಕೆಯ ಬಗ್ಗೆ ಅಗತ್ಯ ಕ್ರಮ ವಹಿಸುವುದು, ಕೊರಗ ಸಮುದಾಯದ ಶೈಕ್ಷಣಿಕ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಇಲಾಖೆಗಳಿಗೆ ಸೂಚನೆ ನೀಡಿದರು.

ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ ಆರ್‌., ತಾ.ಪಂ. ಆಡಳಿತಾಧಿಕಾರಿ ಪೂರ್ಣಿಮಾ, ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್‌ ಡಿ’ಸಿಲ್ವ, ಕೆಡಿಪಿ ನಾಮ ನಿರ್ದೇಶಿತ ಸದಸ್ಯರಾದ ವೈ. ಸುಕುಮಾರ್‌, ಜಿತೇಂದ್ರ ಪುರ್ಟಾಡೋ, ಪ್ರಭಾ ಶೆಟ್ಟಿ, ರಾಜೇಶ್‌ ಕುಲಾಲ್‌, ರಮೇಶ್‌ ಬೆಳ್ಳೆ ಉಪಸ್ಥಿತರಿದ್ದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago