Featured

ಕಾಪು : ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ -Vishwanews24

ಕಾಪು : ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ -Vishwanews24

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿ, ಕೃಷಿ, ರೈತ, ಬೀಡಿ ಕಾರ್ಮಿಕರ ಸಹಿತವಾದ ವಿವಿಧ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಇದರ ನೇತೃತ್ವದಲ್ಲಿ ಕಾಪು ಪೇಟೆಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಭೆ ನಡೆಯಿತು.‌

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದ ಬೆನ್ನೆಲುಬಾದ ರೈತರಿಗೆ, ಕಾರ್ಮಿಕರಿಗೆ ಕಂಟಕ ಪ್ರಾಯವಾದ ನೂತನ ಕಾಯ್ದೆಗಳನ್ನು ಜಾರಿಗೆ ತಂದು ರೈತರ, ಕಾರ್ಮಿಕರ ಬದುಕನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ದುಸ್ತರಗೊಳಿಸಿವೆ ಎಂದರು.

ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಬಳಿಯಿಂದ ಕಾಪು ಪೇಟೆಯವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಬಳಿಕ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು. ಬಳಿಕ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ತಹಶೀಲ್ದಾರ್ ಅವರಿಗೆ ಮನವಿ ನೀಡಲಾಯಿತು.

ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ :ವಿನಯ್ ಕುಮಾರ್ ಸೊರಕೆ -Vishwanews24

ಸಿಐಟಿಯು ರಾಜ್ಯ ಪ್ರತಿನಿಧಿ ಕವಿರಾಜ್, ಸಿಐಟಿಯು ಜಿಲ್ಲಾಧ್ಯಕ್ಷ ಮಹಾಬಲ ವಡೇರ ಹೋಬಳಿ, ಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣ ರೈ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಶೆಟ್ಟಿ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಶಿವಾಜಿ ಸುವರ್ಣ, ಪುರಸಭೆ ಉಪಾಧ್ಯಕ್ಷೆ ಮಾಲಿನಿ, ಹರೀಶ್ ಶೆಟ್ಟಿ ಪಾಂಗಾಳ, ಜಿ.ಪಂ.‌ ಮಾಜಿ ಅಧ್ಯಕ್ಷೆ ಸರಸು ಡಿ.‌ ಬಂಗೇರ, ಕಾಂಗ್ರೆಸ್ ಮುಖಂಡರಾದ ನವೀನ್‌ ಎನ್. ಶೆಟ್ಟಿ, ವೈ. ಸುಕುಮಾರ್, ಸುಧೀರ್ ಕುಮಾರ್, ರಮೀಜ್ ಹುಸೈನ್, ಅಮೀರ್‌ ಮಹಮ್ಮದ್, ಪ್ರಭಾ ಬಿ. ಶೆಟ್ಟಿ, ದೀಪಕ್ ಕುಮಾರ್ ಎರ್ಮಾಳ್, ಸೌರಭ್ ಬಲ್ಲಾಳ್, ಕೀರ್ತಿ ಶೆಟ್ಟಿ, ಹರೀಶ್ ನಾಯಕ್, ಅಖಿಲೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago