ಕಾಪು: ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಉತ್ಪನ್ನಗಳ ಗುಣಮಟ್ಟ ಮತ್ತು ಮಿತ ದರದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ದಲ್ಲಿದೆ ಎಂದು ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ್ ಹೆಗ್ಡೆ ಹೇಳಿದರು.
ಉಳಿಯಾರಗೋಳಿಯಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಸಮೃದ್ಧಿ ಯೋಜನೆಯಡಿಯಲ್ಲಿ ಆರಂಭಗೊಂಡ ನಂದಿನಿ ಕ್ಷೀರ ಮಳಿಗೆ ಉದ್ಘಾಟಿಸಿ ಮಾತನಾಡಿದರು.
ಕೇವಲ 6 ಸಾವಿರ ಲೀ. ಹಾಲಿನೊಂದಿಗೆ ಗ್ರಾಮ ಆರಂಭಗೊಂಡಿರುವ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಇಂದು 5 ಲಕ್ಷ ಲೀಟರಿಗೂ ಹೆಚ್ಚು ಹಾಲು ಸಂಗ್ರಹಿಸುತ್ತಿದೆ ಎಂದು ಹೇಳಿದರು.
ಸಾಯಿರಾಧ ಗ್ರೂಪ್ನ ಆಡಳಿತ
ನಿರ್ದೇಶಕ ಮನೋಹರ್ ಎಸ್.ಶೆಟ್ಟಿ, ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲದ ನಿರ್ದೇಶಕ ಕಾಪು ದಿವಾಕರ್
ಶೆಟ್ಟಿ ಶುಭ ಹಾರೈಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶೈಲಜಾ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭೆಯ ಮಾಜಿ ಅಧ್ಯಕ್ಷೆ ಸೌಮ್ಯಾ
ಸಂಜೀವ, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸ್ಮಿತಾ ಶೆಟ್ಟಿ, ದ.ಕ. ಜಿಲ್ಲಾ ಹಾಲು ಉತ್ಪಾದಕರ
ಒಕ್ಕೂಟದ ಡೆಪ್ಯುಟಿ ಮ್ಯಾನೇಜರ್ ರವಿರಾಜ್ ಉಡುಪ ಉಪಸ್ಥಿತರಿದ್ದರು.
ಕ್ಷೀರ ಮಳಿಗೆಯ ಪಾಲುದಾರ ಮನೋಹರ್ ಕಾಪು ಸ್ವಾಗತಿಸಿ ವಂದಿ ಸಿದರು. ಆರ್ಜೆ ಪ್ರಸನ್ನ ನಿರೂಪಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…