ಕಾಪು: ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಜಾರಿಯಾಗಿದ್ದ ಆರೋಪಿಯ ಮನೆಗೆ ಕೋರ್ಟ್ ವಾರಂಟ್ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿತ ಪರಾರಿಯಾದ ಘಟನೆ ಮಾ. 5ರಂದು ಕಟಪಾಡಿ ಅಚ್ಚಡದಲ್ಲಿ ನಡೆದಿದೆ.
ಕಟಪಾಡಿ ಅಚ್ಚಡ ನಿವಾಸಿ ಸಾದಿಕ್ ವಾರಂಟ್ ತಂದವರ ಮೇಲೆ ಕಾರು ಚಲಾಯಿಸಿ ಪರಾರಿಯಾದಾತ.
ಉಡುಪಿ ಕೋರ್ಟ್ನ ಆದೇಶದಂತೆ ಆರೋಪಿ ಸಾದಿಕ್ನನ್ನು ಮಾ. 7ರೊಳಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿಯ ಕೌಟುಂಬಿಕ ನ್ಯಾಯಾಲಯದ ಬೈಲಿಫ್, ಪ್ರಸ್ತುತ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಸಂಪತ್ ಮತ್ತಿತರರು ಆರೋಪಿಯ ಮನೆಗೆ ತೆರಳಿದ್ದರು.
ಆರೋಪಿಗೆ ದಸ್ತಗಿರಿ ವಾರೆಂಟ್ನ ವಿಷಯವನ್ನು ತಿಳಿಸಿ ತಮ್ಮೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದಾಗ, ಆತ ನ್ಯಾಯಾಲಯಕ್ಕೆ ಹಾಜರಾಗಲು ಒಪ್ಪದೆ ತನ್ನ ಕಾರಲ್ಲಿ ಕುಳಿತು ಎದುರಿನಲ್ಲಿದ್ದ ಮೂವರ ಮೈಮೇಲೆ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…