Featured

ಕಾಪು ಕ್ಷೇತ್ರದಲ್ಲಿ ನೀರಿನ‌ ಸಮಸ್ಯೆ ಇರಬಾರದು ಅನ್ನೋ‌ ಮಹದಾಸೆ ನನ್ನದು : ವಿನಯ್ ಕುಮಾರ್ ಸೊರಕೆ – Vishwanews24

ದೇವಸ್ಥಾನದ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸೊರಕೆ ಆಕ್ರೋಶ

ಕಾಪು: ದೇವರು ಧರ್ಮ ಅಂತಾ ಮಾತಾಡೋ ಬಿಜೆಪಿ ನಾಯಕರು ಇಂದು ದೇವಸ್ಥಾನದ ವಿಷಯದಲ್ಲಿ ಹೀನಾಯ ರಾಜಕೀಯ ಮಾಡೋಕೆ ಶುರು ಮಾಡಿದ್ದಾರೆ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯಡ್ಕ ಪೇಟೆಯಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇವಸ್ಥಾನ ಧರ್ಮ ಅಂತಾ ಯುವಜನತೆಗೆ ಪಾಠ ಹೇಳುವ ಬಿಜೆಪಿ ರಾಜಕೀಯ ನಾಯಕರು ಹಿರಿಯಡ್ಕ ವೀರಭದ್ರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ವಿಚಾರದಲ್ಲಿ ಮತ್ತು ಪೆರ್ಡೂರು ಅನಂತ ಪದ್ಮನಾಭ ದೇವಸ್ಥಾನದ ರಸ್ತೆ ಅಗಲೀಕರಣ ವಿಷಯದಲ್ಲಿ ರಾಜಕೀಯ ಮಾಡಿ ದೇವಸ್ಥಾನದ ವಾಸ್ತುವಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ನನ್ನ ಶಾಸಕತ್ವದ ಅವಧಿಯಲ್ಲಿ ಹಿರಿಯಡ್ಕ ವ್ಯಾಪ್ತಿಯಲ್ಲಿ 800 ಅಕ್ರಮ ಸಕ್ರಮದ ಮನೆ ನಿವೇಶನ ಶಿಫಾರಸು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಪ್ರತೀ ಪಂಚಾಯತ್ ನಲ್ಲಿ ಬಹಳಷ್ಟು ಅರ್ಜಿಯ ಗಂಟಿದೆ. ಆ ಗಂಟು ಬಿಚ್ಚೋ ಕೆಲಸವನ್ನು ಮಾಡಬೇಕಿದೆ.ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ.

ಹಿರಿಯಡ್ಕದಲ್ಲಿ ನಾಡ ಕಚೇರಿ ಸ್ಥಾಪನೆಯ ಅಗತ್ಯತೆ ಇದೆ. ಕಾಪು ಕ್ಷೇತ್ರದಲ್ಲಿ ನೀರಿನ‌ ಸಮಸ್ಯೆ ಇರಬಾರದು ಅನ್ನೋ‌ ಮಹದಾಸೆ ನನ್ನದು ಹೀಗಾಗಿ ಮಣಿಪುರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕೆಲಸ ಆರಂಭವಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago