Featured

ಕಾಪು ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು : ಶಾಸಕ ಲಾಲಾಜಿ ಆರ್ ಮೆಂಡನ್ -Vishwanews24

ಕಾಪು : ಕಾಪು ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಇದರ ಸದ್ಬಳಕೆ ಮಾಡಿಕೊಂಡು ಸಮಗ್ರ ಅಭಿವೃದ್ಧಿಯತ್ತ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.

ಬುಧವಾರ ಕಾಪು ಪುರಸಭಾ ಸಭಾಭವನದಲ್ಲಿ ನಡೆದ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾವಿರಾರು ಕೋಟಿಯ ಯೋಜನೆಗಳು ಕಾಪು ಕ್ಷೇತ್ರಗಳಲ್ಲಿ ಇದ್ದರೂ ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಕೈಗಾರಿಕೆಗಳು ಇನ್ನಷ್ಟು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿಕೊಂಡಬೇಕಾಗಿದೆ. ಕಾಪು, ಪಡುಬಿದ್ರಿ, ಬ್ಲೂಫ್ಲಾಗ್ ಬೀಚ್‍ಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸೋಧ್ಯಮಕ್ಕೆ ಹೊಸ ಚೈತನ್ಯ ತುಂಬಲಾಗುವುದು ಎಂದರು.

ಮೆಸ್ಕಾಂಗೆ ಕಚೇರಿಗೆ ಸೂಕ್ತ ನಿವೇಶನ, ಮಿನಿ ವಿಧಾನಸೌಧ ಸಹಿತ ವಿವಿಧ ಕಚೇರಿಗಳಿಗೆ ಕಟ್ಟಡ ನಿರ್ಮಾಣ, ಮಿನಿವಿಧಾನಸೌಧ ನಿರ್ಮಾಣ ಕ್ಕಾಗಿ 10 ಕೋಟಿ ರೂ. ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಎಡಿಸಿ ಸದಾಶಿವ ಪ್ರಭು, ಜಿಲ್ಲಾ ಪಂ. ಅಧ್ಯಕ್ಷ ದಿನಕರ್ ಬಾಬು, ತಾಲ್ಲೂಕು ಪಂ. ಅಧ್ಯಕ್ಷೆ ನೀತಾ ಗುರುರಾಜ್, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಖ್, ಜಿಲ್ಲಾ ಪಂ. ಮುಖ್ಯಯೋಜನಾಧಿಕಾರಿ ಶ್ರೀನಿವಾಸ ರಾವ್, ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಜಿಲ್ಲಾ ಪಂ. ಸದಸ್ಯರು, ತಾಲ್ಲೂಕು ಪಂ. ಸದಸ್ಯರು, ಗ್ರಾಮ ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭಾ ಸದಸ್ಯರು ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago