ಕಾಪು (Vishwanews24 ): ಖ್ಯಾತ ಸಾಹಿತಿ, ಬರಹಗಾರ್ತಿ ,ಕನ್ನಡ ಕಥೆಗಾರ್ತಿ ಮುಸ್ಲಿಂ ಸಮುದಾಯದಲ್ಲಿ ಹಿರಿಯ ಲೇಖಕಿಯೆಂದು ಗುರುತಿಸಿಕೊಂಡ ಬೆಳಪು ಮಿಲಿಟರಿ ಕಾಲೊನಿ ನಿವಾಸಿ ಮಮ್ತಾಜ್ ಬೇಗಂ (73) ಅವರು ಏ. 6ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಗುಜರಾತ್ ನಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಪುತ್ರಿ ಜೊತೆ ವಾಸವಿದ್ದ ಅವರು, ತಾವು ರಚಿಸಿದ ಸೂರ್ಯಾಸ್ತ ಪುಸ್ತಕದ ಬಿಡುಗಡೆಗಾಗಿ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ಕೋವಿಡ್ ಪಾಸಿಟಿವ್ ಗೆ ಸಿಲುಕಿ, ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಳೆದ ಐದು ದಶಕಗಳಿಂದ ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದಿದ್ದ ಅವರು ತಪಸ್ವಿ, ಪರದೇಶಿ(1989) ವರ್ತುಲ(1994) ಬಂದಳಿಕೆ(2002) ಜಂಪಿ ಮತ್ತು ಕೆಂಪಿ(ಮಕ್ಕಳ ವೈಜ್ಞಾನಿಕ ಕಾದಂಬರಿ)ಕಾದಂಬರಿ ಸಹಿತ ವಿವಿಧ ಪುಸ್ತಕಗಳನ್ನು ಬರೆದಿದ್ದರು. ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿನ ಸಾಧನೆಗಾಗಿ ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ, ಹಿರಿಯ ನಾಗರಿಕರ ಸಾಹಿತ್ಯ ಪ್ರಶಸ್ತಿ, ಬಸವ ಸಾಹಿತ್ಯ ಕಲಾವೇದಿಕೆಯ ಬಸವ ಜ್ಯೋತಿ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದರು.
ಉರ್ದು ಮಾಧ್ಯಮದಲ್ಲಿ ಪ್ರಾರ್ಥಮಿಕ ವಿದ್ಯಾಭ್ಯಾಸ ಮಾಡಿ, ಕನ್ನಡದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಪೂರೈಸಿದ ಇವರು ಸಮಾಜಶಾಸ್ತ್ರದಲ್ಲಿ ಬಿ. ಎ. ಪದವಿ ಹಾಗೂ ಬಿ. ಎಡ್. ಪದವೀಧರರಾಗಿದ್ದರು ಕೆಲವು ಕಾಲ ಗ್ರಿಂಡ್ಲೆಸ್ ಬ್ಯಾಂಕ್ ನಲ್ಲಿ ಹಾಗೂ ಯುನೆಸ್ಕೋದಲ್ಲಿ ಸೇವೆಗೈದಿದ್ದಾರೆ. ಇವರ ತಾಯಿ ಅಧ್ಯಾಪಕಿ ಹಾಗೂ ತಂದೆ ಸೈನ್ಯ ದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…