ಉಡುಪಿ: ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಕಾಪು ತಾಲ್ಲೂಕಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಮೀಳಾ (40) ಎಂದು ಗುರುತಿಸಲಾಗಿದೆ.
ಪ್ರಮೀಳಾ ಎಂಬುವವರನ್ನು 15 ವರ್ಷಗಳ ಹಿಂದೆ ಭಾಸ್ಕರ ಶೆಟ್ಟಿ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯಾದ ದಿನದಿಂದ ಗಂಡ ಭಾಸ್ಕರ ಶೆಟ್ಟಿ ಪತ್ನಿಯ ಬಗ್ಗೆ ಅನುಮಾನಪಡುತ್ತಾ ಕೈಗಳಿಂದ ಹೊಡೆದು, ಕಾಲುಗಳಿಂದ ತುಳಿದು ದೈಹಿಕವಾಗಿ ಹಿಂಸಿಸುತ್ತಿದ್ದರು.
ಇದರಿಂದ ಬೇಸತ್ತ ಪ್ರಮೀಳಾ ತನ್ನ ತಂದೆಯ ಸಹಾಯದಿಂದ ಪಡುಬಿದ್ರಿಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಆದರೂ ಆತ ಹಿಂಸಿಸುತ್ತಿದ್ದ. ಡಿ. 18 ರಂದು ರಾತ್ರಿ 10 ಗಂಟೆಗೆ ಭಾಸ್ಕರ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವೇಳೆ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು.
ಆದರೆ ಡಿ. 20 ರಂದು ರಾತ್ರಿ 10 ಗಂಟೆಗೆ ಪ್ರಮೀಳಾ ತನ್ನ ತಾಯಿ ಹಾಗೂ ಮಗನ ಜೊತೆ ಮನೆಯಲ್ಲಿ ಊಟ ಮಾಡುತ್ತಿದ್ದರು.
ಈ ವೇಳೆ ಕುಡಿದು ಬಂದ ಭಾಸ್ಕರ ಮಗನಿಗೂ ಮದ್ಯವನ್ನು ಕುಡಿಯುವಂತೆ ಒತ್ತಾಯಿಸಿರುತ್ತಾರೆ, ಇದಕ್ಕೆ ಪ್ರಮೀಳಾ ಆಕ್ಷೇಪಿಸಿದಾಗ ಅವಾಚ್ಯವಾಗಿ ಬೈದು ಕಾಲಿಗೆ ಹೊಟ್ಟೆಗೆ ತುಳಿದು ಹೊಡೆದಿದ್ದಾರೆ.
ಇದರಿಂದ ಬೇಸತ್ತ ಪ್ರಮೀಳಾ ಡಿ.27ರಂದು ಸಂಜೆ 6:30 ಗಂಟೆಗೆ ಮನೆಯಲ್ಲಿ ತಂದಿರಿಸಿದ ನಿದ್ರೆಮಾತ್ರೆಯನ್ನು ಸೇವಿಸಿ, ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ತಾಯಿ ಅಸ್ವಸ್ಥಗೊಂಡ ಪ್ರಮೀಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…