ಉಡುಪಿ: ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಕಾಪು ತಾಲ್ಲೂಕಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಮೀಳಾ (40) ಎಂದು ಗುರುತಿಸಲಾಗಿದೆ.
ಪ್ರಮೀಳಾ ಎಂಬುವವರನ್ನು 15 ವರ್ಷಗಳ ಹಿಂದೆ ಭಾಸ್ಕರ ಶೆಟ್ಟಿ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯಾದ ದಿನದಿಂದ ಗಂಡ ಭಾಸ್ಕರ ಶೆಟ್ಟಿ ಪತ್ನಿಯ ಬಗ್ಗೆ ಅನುಮಾನಪಡುತ್ತಾ ಕೈಗಳಿಂದ ಹೊಡೆದು, ಕಾಲುಗಳಿಂದ ತುಳಿದು ದೈಹಿಕವಾಗಿ ಹಿಂಸಿಸುತ್ತಿದ್ದರು.
ಇದರಿಂದ ಬೇಸತ್ತ ಪ್ರಮೀಳಾ ತನ್ನ ತಂದೆಯ ಸಹಾಯದಿಂದ ಪಡುಬಿದ್ರಿಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಆದರೂ ಆತ ಹಿಂಸಿಸುತ್ತಿದ್ದ. ಡಿ. 18 ರಂದು ರಾತ್ರಿ 10 ಗಂಟೆಗೆ ಭಾಸ್ಕರ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವೇಳೆ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು.
ಆದರೆ ಡಿ. 20 ರಂದು ರಾತ್ರಿ 10 ಗಂಟೆಗೆ ಪ್ರಮೀಳಾ ತನ್ನ ತಾಯಿ ಹಾಗೂ ಮಗನ ಜೊತೆ ಮನೆಯಲ್ಲಿ ಊಟ ಮಾಡುತ್ತಿದ್ದರು.
ಈ ವೇಳೆ ಕುಡಿದು ಬಂದ ಭಾಸ್ಕರ ಮಗನಿಗೂ ಮದ್ಯವನ್ನು ಕುಡಿಯುವಂತೆ ಒತ್ತಾಯಿಸಿರುತ್ತಾರೆ, ಇದಕ್ಕೆ ಪ್ರಮೀಳಾ ಆಕ್ಷೇಪಿಸಿದಾಗ ಅವಾಚ್ಯವಾಗಿ ಬೈದು ಕಾಲಿಗೆ ಹೊಟ್ಟೆಗೆ ತುಳಿದು ಹೊಡೆದಿದ್ದಾರೆ.
ಇದರಿಂದ ಬೇಸತ್ತ ಪ್ರಮೀಳಾ ಡಿ.27ರಂದು ಸಂಜೆ 6:30 ಗಂಟೆಗೆ ಮನೆಯಲ್ಲಿ ತಂದಿರಿಸಿದ ನಿದ್ರೆಮಾತ್ರೆಯನ್ನು ಸೇವಿಸಿ, ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ತಾಯಿ ಅಸ್ವಸ್ಥಗೊಂಡ ಪ್ರಮೀಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…