Featured

ಕಾಪು : ಗಂಡನಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ – ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ  ; ಪ್ರಕರಣ ದಾಖಲು – Vishwanews24

ಉಡುಪಿ: ಗಂಡನಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ – ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ  ; ಪ್ರಕರಣ ದಾಖಲು – Vishwanews24

ಉಡುಪಿ: ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಕಾಪು ತಾಲ್ಲೂಕಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಮೀಳಾ (40) ಎಂದು ಗುರುತಿಸಲಾಗಿದೆ.

ಪ್ರಮೀಳಾ ಎಂಬುವವರನ್ನು 15 ವರ್ಷಗಳ ಹಿಂದೆ ಭಾಸ್ಕರ ಶೆಟ್ಟಿ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯಾದ ದಿನದಿಂದ ಗಂಡ ಭಾಸ್ಕರ ಶೆಟ್ಟಿ ಪತ್ನಿಯ ಬಗ್ಗೆ ಅನುಮಾನಪಡುತ್ತಾ ಕೈಗಳಿಂದ ಹೊಡೆದು, ಕಾಲುಗಳಿಂದ ತುಳಿದು ದೈಹಿಕವಾಗಿ ಹಿಂಸಿಸುತ್ತಿದ್ದರು.

ಇದರಿಂದ ಬೇಸತ್ತ ಪ್ರಮೀಳಾ ತನ್ನ ತಂದೆಯ ಸಹಾಯದಿಂದ ಪಡುಬಿದ್ರಿಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಆದರೂ ಆತ ಹಿಂಸಿಸುತ್ತಿದ್ದ. ಡಿ. 18 ರಂದು ರಾತ್ರಿ 10 ಗಂಟೆಗೆ ಭಾಸ್ಕರ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವೇಳೆ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು.

ಆದರೆ ಡಿ. 20 ರಂದು ರಾತ್ರಿ 10 ಗಂಟೆಗೆ ಪ್ರಮೀಳಾ ತನ್ನ ತಾಯಿ ಹಾಗೂ ಮಗನ ಜೊತೆ ಮನೆಯಲ್ಲಿ ಊಟ ಮಾಡುತ್ತಿದ್ದರು.

ಈ ವೇಳೆ ಕುಡಿದು ಬಂದ ಭಾಸ್ಕರ ಮಗನಿಗೂ ಮದ್ಯವನ್ನು ಕುಡಿಯುವಂತೆ ಒತ್ತಾಯಿಸಿರುತ್ತಾರೆ, ಇದಕ್ಕೆ ಪ್ರಮೀಳಾ ಆಕ್ಷೇಪಿಸಿದಾಗ ಅವಾಚ್ಯವಾಗಿ ಬೈದು ಕಾಲಿಗೆ ಹೊಟ್ಟೆಗೆ ತುಳಿದು ಹೊಡೆದಿದ್ದಾರೆ.

ಇದರಿಂದ ಬೇಸತ್ತ ಪ್ರಮೀಳಾ ಡಿ.27ರಂದು ಸಂಜೆ 6:30 ಗಂಟೆಗೆ ಮನೆಯಲ್ಲಿ ತಂದಿರಿಸಿದ ನಿದ್ರೆಮಾತ್ರೆಯನ್ನು ಸೇವಿಸಿ, ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ತಾಯಿ ಅಸ್ವಸ್ಥಗೊಂಡ ಪ್ರಮೀಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago