ಕಾಪು ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಉನ್ನತ ಮಟ್ಟದ ತನಿಖೆಗೆ ವಿಹಿಂಪ ಆಗ್ರಹ – Vishwanews24
ಕಾಪು ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಉನ್ನತ ಮಟ್ಟದ ತನಿಖೆಗೆ ವಿಹಿಂಪ ಆಗ್ರಹ – Vishwanews24
ಉಡುಪಿ: ಕಾಪುವಿನ ಮಲ್ಲಾರು ನಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ವಿಷಾದನೀಯ ಎಂದು ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹೇಳಿದ್ದಾರೆ
ಆದರೆ ಗುಜರಿ ಅಂಗಡಿಯಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸ್ಪೋಟ ನಡೆದಿದ್ದು ಇಬ್ಬರ ಸಾವಿಗೆ ಗ್ಯಾಸ್ ಸಿಲಿಂಡರ್ ಸ್ಪೋಟ ಎಂದು ಹೇಳುತ್ತಿದ್ದರೂ ಸಾರ್ವಜನಿಕರಲ್ಲಿ ಒಂದು ರೀತಿಯ ಸಂಶಯದ ವಾತಾವರಣ ಇದ್ದು ಹಾಗಾಗಿ ಈ ಘಟನೆಯನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕೆಂದು ಅವರು ಅಗ್ರಹಿಸಿದ್ದಾರೆ.

