ಕಾಪು : ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ : ಸಚಿವ ಕೋಟ – Vishwanews24

Featured, ಉಡುಪಿ

ಸಮಸ್ತ ಬಿಲ್ಲವರು, ಈಡಿಗರ ಒತ್ತಾಸೆಯಂತೆ ನಾರಾಯಣಗುರು ನಿಗಮ ಸ್ಥಾಪನೆ

ಕಾಪು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಸಮಸ್ತ ಬಿಲ್ಲವರು ಮತ್ತು ಈಡಿಗರ ಒತ್ತಾಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವೂ ಸೇರಿದಂತೆ ಕುಂಬಾರ, ಬಲಿಜರು, ಗಾಣಿಗ ಸಹಿತ 12 ನಿಗಮಗಳನ್ನು ಸ್ಥಾಪಿಸಿದೆ.

ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ, ಅಗ್ನಿಪಥ್‌ ಸೇನಾ ತರಬೇತಿಗಾಗಿ ಕೋಟಿ ಚೆನ್ನಯ ಸೇನಾ ಪೂರ್ವ ತರಬೇತಿ ಶಿಬಿರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಸಮುದಾಯ ಭವನವೂ ಸೇರಿದಂತೆ ಹಿಂದೆಂಗಿಂತಲೂ ಹೆಚ್ಚಿನ ಮೊತ್ತದ ಅನುದಾನವನ್ನು ಬಿಡುಗಡೆಗೊಳಿಸಿದೆ. ಸರಕಾರದ ಅಭಿವೃದ್ಧಿ ಕಾರ್ಯಗಳೇ ಬಿಜೆಪಿಯ ಗೆಲುವಿಗೆ ಪೂರಕವಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಕಾಪು ಮಂಡಲ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ರಾಜ್ಯಾದ್ಯಂತ 2 ದಿನಗಳ ಕಾಲ ಮಹಾ ಪ್ರಚಾರ ಅಭಿಯಾನವನ್ನು ನಡೆಸು ತ್ತಿದ್ದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಾರಾಯಣಗುರುಗಳ ಮೂರ್ತಿಗೆ ಮಾಲಾರ್ಪಣೆಗೈದು, ಪ್ರಾರ್ಥನೆ ಸಲ್ಲಿಸಿ ಮಹಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ – Viswhanews24

ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಸಂಪೂರ್ಣ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲ ವರ್ಗದ ಜನರು ಜಾತಿ, ಮತ, ಭೇದವಿಲ್ಲದೇ ಅವರ ಸೇವಾ ಕಾರ್ಯವನ್ನು ಪ್ರಶಂಸಿಸಿ, ಬೆಂಬಲಿಸುತ್ತಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಸಾಧನೆ ಹಾಗೂ ಕಳೆದ 5 ವರ್ಷಗಳಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಜನರೇ ಸ್ವಯಂ ಪ್ರೇರಿತರಾಗಿ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ ಎಂದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಚುನಾವಣಾ ಉಸ್ತುವಾರಿ ಸುಲೋಚನಾ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಆಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್‌, ಪ್ರಮುಖರಾದ ಕಿರಣ್‌ ಆಳ್ವ, ಹರೀಶ್‌ ಶೆಟ್ಟಿ ಉಪಸ್ಥಿತರಿದ್ದರು.

Leave a Reply