ಉಡುಪಿ

ಕಾಪು : ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ : ಸಚಿವ ಕೋಟ – Vishwanews24

ಸಮಸ್ತ ಬಿಲ್ಲವರು, ಈಡಿಗರ ಒತ್ತಾಸೆಯಂತೆ ನಾರಾಯಣಗುರು ನಿಗಮ ಸ್ಥಾಪನೆ

ಕಾಪು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಸಮಸ್ತ ಬಿಲ್ಲವರು ಮತ್ತು ಈಡಿಗರ ಒತ್ತಾಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವೂ ಸೇರಿದಂತೆ ಕುಂಬಾರ, ಬಲಿಜರು, ಗಾಣಿಗ ಸಹಿತ 12 ನಿಗಮಗಳನ್ನು ಸ್ಥಾಪಿಸಿದೆ.

ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ, ಅಗ್ನಿಪಥ್‌ ಸೇನಾ ತರಬೇತಿಗಾಗಿ ಕೋಟಿ ಚೆನ್ನಯ ಸೇನಾ ಪೂರ್ವ ತರಬೇತಿ ಶಿಬಿರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಸಮುದಾಯ ಭವನವೂ ಸೇರಿದಂತೆ ಹಿಂದೆಂಗಿಂತಲೂ ಹೆಚ್ಚಿನ ಮೊತ್ತದ ಅನುದಾನವನ್ನು ಬಿಡುಗಡೆಗೊಳಿಸಿದೆ. ಸರಕಾರದ ಅಭಿವೃದ್ಧಿ ಕಾರ್ಯಗಳೇ ಬಿಜೆಪಿಯ ಗೆಲುವಿಗೆ ಪೂರಕವಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಕಾಪು ಮಂಡಲ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ರಾಜ್ಯಾದ್ಯಂತ 2 ದಿನಗಳ ಕಾಲ ಮಹಾ ಪ್ರಚಾರ ಅಭಿಯಾನವನ್ನು ನಡೆಸು ತ್ತಿದ್ದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಾರಾಯಣಗುರುಗಳ ಮೂರ್ತಿಗೆ ಮಾಲಾರ್ಪಣೆಗೈದು, ಪ್ರಾರ್ಥನೆ ಸಲ್ಲಿಸಿ ಮಹಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಸಂಪೂರ್ಣ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲ ವರ್ಗದ ಜನರು ಜಾತಿ, ಮತ, ಭೇದವಿಲ್ಲದೇ ಅವರ ಸೇವಾ ಕಾರ್ಯವನ್ನು ಪ್ರಶಂಸಿಸಿ, ಬೆಂಬಲಿಸುತ್ತಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಸಾಧನೆ ಹಾಗೂ ಕಳೆದ 5 ವರ್ಷಗಳಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಜನರೇ ಸ್ವಯಂ ಪ್ರೇರಿತರಾಗಿ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ ಎಂದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಚುನಾವಣಾ ಉಸ್ತುವಾರಿ ಸುಲೋಚನಾ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಆಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್‌, ಪ್ರಮುಖರಾದ ಕಿರಣ್‌ ಆಳ್ವ, ಹರೀಶ್‌ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago