ಬೆಂಗಳೂರು: ಉಡುಪಿಯ ಕಾಪುವಿನ ಮಲ್ಲಾರು ಗ್ರಾಮದ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೃತಪಟ್ಟ ಇಬ್ಬರಿಗೆ ಸರಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ಶಾಸಕ ಲಾಲಾಜಿ ಮೆಂಡನ್ ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಇಂದು ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಶಾಸಕ ಲಾಲಾಜಿ ಮೆಂಡನ್ ಅವರು, ಘಟನೆಯಲ್ಲಿ ಇಬ್ಬರು ಅಸುನೀಗಿದ್ದು ನಾಲ್ಕೈದು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಆ ಪೈಕಿ ಇಬ್ಬರು ಶೇ.90ರಷ್ಟು ಸುಟ್ಟಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕ ವಾಗಿದೆ. ಗಾಯಾಳುಗಳಿಗೆ ರಾಜ್ಯ ಸರಕಾರ ಉಚಿತವಾಗಿ ಚಿಕಿತ್ಸೆ ನೀಡಬೇಕು’ ಎಂದು ಒತ್ತಾಯಿಸಿದರು. ಹಾಗೂ ಮೃತಪಟ್ಟ ಇಬ್ಬರಿಗೆ ಸರಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.
ಇದೇ ವೇಳೆ ಸದಸ್ಯರ ಪ್ರಸ್ತಾಪಕ್ಕೆ ಉತ್ತರ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಅವರು, ‘ಕಾಪುವಿನ ಗುಜರಿ ಅಂಗಡಿಯಲ್ಲಿ ಅನಧಿಕೃತವಾಗಿ ಗ್ಯಾಸ್ ಕಟರ್ ಬಳಕೆ ಹಿನ್ನೆಲೆಯಲ್ಲಿ ಅನಿಲ ಸ್ಫೋಟದಿಂದ ದುರಂತ ಸಂಭವಿಸಿದೆ. ಇಬ್ಬರು ಅಸುನೀಗಿದ್ದು, ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಕೂಡಲೇ ವರದಿ ತರಿಸಿಕೊಂಡು ಪರಿಹಾರ ವಿತರಣೆ, ಗಾಯಾಳುಗಳಿಗೆ ಚಿಕಿತ್ಸೆ ಕಲ್ಪಿಸುವ ಸಂಬಂಧ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…