Featured

ಕಾಪು ಗ್ಯಾಸ್ ಸಿಲಿಂಡರ್  ಸ್ಪೋಟ ಪ್ರಕರಣ: ಮೃತ ಕುಟುಂಬಕ್ಕೆ ಸರಕಾರ ಕೂಡಲೇ ಪರಿಹಾರ ನೀಡಬೇಕು :  ಲಾಲಾಜಿ ಆಗ್ರಹ – Vishwanews24

ಗಾಯಾಳುಗಳಿಗೆ ರಾಜ್ಯ ಸರಕಾರ ಉಚಿತವಾಗಿ ಚಿಕಿತ್ಸೆ ನೀಡಬೇಕು..

ಮೃತಪಟ್ಟ ಇಬ್ಬರ ಕುಟುಂಬಕ್ಕೆ ಸರಕಾರ ಕೂಡಲೇ ಪರಿಹಾರ ನೀಡಬೇಕು..

ಬೆಂಗಳೂರು: ಉಡುಪಿಯ ಕಾಪುವಿನ ಮಲ್ಲಾರು ಗ್ರಾಮದ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೃತಪಟ್ಟ ಇಬ್ಬರಿಗೆ ಸರಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ಶಾಸಕ ಲಾಲಾಜಿ ಮೆಂಡನ್ ಆಗ್ರಹಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಇಂದು ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಶಾಸಕ ಲಾಲಾಜಿ ಮೆಂಡನ್ ಅವರು, ಘಟನೆಯಲ್ಲಿ ಇಬ್ಬರು ಅಸುನೀಗಿದ್ದು ನಾಲ್ಕೈದು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಆ ಪೈಕಿ ಇಬ್ಬರು ಶೇ.90ರಷ್ಟು ಸುಟ್ಟಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕ ವಾಗಿದೆ. ಗಾಯಾಳುಗಳಿಗೆ ರಾಜ್ಯ ಸರಕಾರ ಉಚಿತವಾಗಿ ಚಿಕಿತ್ಸೆ ನೀಡಬೇಕು’ ಎಂದು ಒತ್ತಾಯಿಸಿದರು. ಹಾಗೂ ಮೃತಪಟ್ಟ ಇಬ್ಬರಿಗೆ ಸರಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ಇದೇ ವೇಳೆ ಸದಸ್ಯರ ಪ್ರಸ್ತಾಪಕ್ಕೆ ಉತ್ತರ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಅವರು, ‘ಕಾಪುವಿನ ಗುಜರಿ ಅಂಗಡಿಯಲ್ಲಿ ಅನಧಿಕೃತವಾಗಿ ಗ್ಯಾಸ್ ಕಟರ್ ಬಳಕೆ ಹಿನ್ನೆಲೆಯಲ್ಲಿ ಅನಿಲ ಸ್ಫೋಟದಿಂದ ದುರಂತ ಸಂಭವಿಸಿದೆ. ಇಬ್ಬರು ಅಸುನೀಗಿದ್ದು, ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಕೂಡಲೇ ವರದಿ ತರಿಸಿಕೊಂಡು ಪರಿಹಾರ ವಿತರಣೆ, ಗಾಯಾಳುಗಳಿಗೆ ಚಿಕಿತ್ಸೆ ಕಲ್ಪಿಸುವ ಸಂಬಂಧ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

19 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

22 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

22 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

23 hours ago