ಕಾಪು : ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ಪುರಸಭೆ ಸಹಿತ ವಿಧಾನಸಭಾ ಕ್ಷೇತ್ರದ ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ಸೋಮವಾರ ಬಿಜೆಪಿ ಧರಣಿ ಸತ್ಯಾಗ್ರಹದೊಂದಿಗೆ ಪ್ರತಿಭಟನೆ ನಡೆಸಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಅಭಿವೃದ್ಧಿ ಕುರಿತಾದ ಬೇಡಿಕಡೆಗಳಿಗೆ ಸ್ಪಂಧನೆ ನೀಡದ ರಾಜ್ಯ ಸರಕಾರ ಈಗ ಏಕಾಏಕಿಯಾಗಿ ಪಿಂಚಣಿ ಸೌಲಭ್ಯಗಳನ್ನು ತಡೆ ಹಿಡಿಯುವ ಪ್ರಯತ್ನಕ್ಕೆ ಕೈ ಹಾಕಿದೆ. ಇದರ ಜತೆಗೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಕಾಪು ಕ್ಷೇತ್ರದ 26 ಗ್ರಾಮ ಪಂಚಾಯತ್ ಮತ್ತು ಪುರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು ಇದು ನಮ್ಮ ಜವಬ್ದಾರಿಯೂ ಆಗಿದೆ ಎಂದರು.
ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರದ ವಿರುದ್ಧ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿದೆ. ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಸಹಿತ ಪಿಂಚಣಿ ಸೌಲಭ್ಯಗಳನ್ನು ತಡೆ ಹಿಡಿಯಲು ಮುಂದಾದ ರಾಜ್ಯ ಸರಕಾರ ನಡೆ ಖಂಡನೀಯವಾಗಿದೆ ಎಂದರು.
ಈ ಸಂದರ್ಭ ಮಾಜಿ ಶಾಸಕ ಲಾಲಾಜಿ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…