ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಕಾಪು ಕ್ಷೇತ್ರದ 8-9 ಕಡಲ್ಕೊರೆತ ಪ್ರದೇಶಗಳನ್ನು ಪರಿಶೀಲಿಸಿದ್ದು, ಅಗತ್ಯವಿರುವಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಬಂದರು ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಾಗಿ ಕೂಡಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದ್ದು, ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಡಲ್ಕೊರೆತ ತೀವ್ರಗೊಂಡು ಕರಾವಳಿ ನಿವಾಸಿಗಳು ಆತಂಕದಲ್ಲಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಸುಮಾರು 100 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಗೊಂಡಿದ್ದು, ಈ ಕುರಿತು ವಿಧಾನಸಭೆಯ ಅಧಿವೇಶನದಲ್ಲಿಯೂ ಪ್ರಸ್ತಾವಿಸಲಾಗಿದೆ ಎಂದರು.