Featured

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ

ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಸಮಸ್ಯೆಗಳು ಹಾಗೂ ತತ್‌ಕ್ಷಣದ ಪರಿಹಾರದ ಅಗತ್ಯದ ಕುರಿತು ಮಾಹಿತಿ ಪಡೆದರು.

ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಕಾಪು ಕ್ಷೇತ್ರದ 8-9 ಕಡಲ್ಕೊರೆತ ಪ್ರದೇಶಗಳನ್ನು ಪರಿಶೀಲಿಸಿದ್ದು, ಅಗತ್ಯವಿರುವಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಬಂದರು ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಾಗಿ ಕೂಡಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದ್ದು, ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದರು.

ಶಾಶ್ವತ ಪರಿಹಾರಕ್ಕಾಗಿ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಚೆನ್ನೈ ಮೂಲದ ತಜ್ಞ ಸಂಸ್ಥೆಯೊಂದಿಗೆ ಸಮಾಲೋಚನೆ ನಡೆಯುತ್ತಿದೆ. ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್ (ಎಸ್‌ಎಂಪಿ) ಆಧಾರದಲ್ಲಿ ತಜ್ಞರ ಸಲಹೆಯಂತೆ ಸೂಕ್ತ ಮಾದರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಡಲ್ಕೊರೆತ ತೀವ್ರಗೊಂಡು ಕರಾವಳಿ ನಿವಾಸಿಗಳು ಆತಂಕದಲ್ಲಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಸುಮಾರು 100 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಗೊಂಡಿದ್ದು, ಈ ಕುರಿತು ವಿಧಾನಸಭೆಯ ಅಧಿವೇಶನದಲ್ಲಿಯೂ ಪ್ರಸ್ತಾವಿಸಲಾಗಿದೆ ಎಂದರು.

Vishwa News 24

Recent Posts

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

11 minutes ago

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ; ಮಲ್ಪೆಯಲ್ಲಿ ಕಡಲಿಗಿಳಿಯದ ದೋಣಿಗಳು – vishwanews24

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು ಮಂಗಳೂರು/ಉಡುಪಿ: ಮೀನುಗಾರಿಕೆ ನಿಷೇಧ ತೆರವಾಗಿರುವ ಮೂರನೇ…

32 minutes ago

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ…

39 minutes ago

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ…

42 minutes ago

ಉಡುಪಿ: ವ್ಯಕ್ತಿ ನಾಪತ್ತೆ – vishwanews24

ಉಡುಪಿ: ವ್ಯಕ್ತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…

50 minutes ago

ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ – vishwanews24

ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…

56 minutes ago