Featured

ಕಾಪು : ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಪೊಲೀಸ್ ವರಿಷ್ಠಾಧಿಕಾರಿಯಿಂದ  ಬೇಜವಾಬ್ದಾರಿಯ ಹೇಳಿಕೆ : ಶಿಲ್ಪಾ ಜಿ. ಸುವರ್ಣ – Vishwanews24

ಕಾಪು : ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಪೊಲೀಸ್ ವರಿಷ್ಠಾಧಿಕಾರಿಯಿಂದ  ಬೇಜವಾಬ್ದಾರಿಯ ಹೇಳಿಕೆ : ಶಿಲ್ಪಾ ಜಿ. ಸುವರ್ಣ

ಕಾಪು : ಉಡುಪಿಯ ನೇತ್ರ ಜ್ಯೋತಿ ಪ್ಯಾರ ಮೇಡಿಕಲ್ ಕಾಲೇಜ್ ನಲ್ಲಿ ವಿಕೃತ ಮನಸ್ಸಿನ ಮೂವರು ವಿದ್ಯಾರ್ಥಿನಿಯರಿಂದ ನಡೆದ ವಿಡಿಯೋ ಚಿತ್ರೀಕರಣ ಘಟನೆ ಖಂಡನೀಯವಾಗಿದೆ. ಒಬ್ಬ ಮಹಿಳೆಯಾಗಿ,ಹೆಣ್ಣು ಮಗಳ ತಾಯಿಯಾಗಿ ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ನಡೆಸಿರುವ ಘಟನೆಯ ಬಗ್ಗೆ ತಿಳಿದಾಗ ನಮ್ಮ ಉಡುಪಿಯಲ್ಲಿ ಕೂಡ ಇಂತಹ ಮಾನಸಿಕತೆಯ ವಿದ್ಯಾರ್ಥಿನಿಯರು ಇದ್ದಾರೆಯೇ ಎಂಬ ಪ್ರಶ್ನೆ ಮನಸ್ಸಿನಲ್ಲಿ ಬಂದಿದೆ. ಕಾಲೇಜು ಆಡಳಿತ ಮಂಡಳಿ ತಪ್ಪಿತಸ್ಥ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿ ಅವರಿಂದ ವಶ ಪಡಿಸಿಕೊಂಡ ಮೊಬೈಲನ್ನು ಪೊಲೀಸ್ ಇಲಾಖೆಗೆ ನೀಡಿದ್ದೇವೆ ಎಂದು ಹೇಳುತ್ತಾರೆ. ಆದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯವರು ನಮಗೆ ಘಟನೆಯ ಬಗ್ಗೆ ಗೊತ್ತಿಲ್ಲ ಎಂದು ಹೇಳುತ್ತಾರೆ. ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಂತಹ ಬೇಜವಾಬ್ದಾರಿಯ ಹೇಳಿಕೆಯ ಹಿಂದಿನ ಗುಟ್ಟೇನು ? ಎನ್ನುವುದು ಬಹಿರಂಗಗೊಳ್ಳಬೇಕಿದೆ. ಸಂಬಂಧ ಪಟ್ಟ ಪೊಲೀಸ್ ಇಲಾಖೆಯವರು ಇನ್ನಾದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಹೇಯ ಕೃತ್ಯ ನಡೆಸಿರುವ ಮೂವರು ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ.

ಈ ಘಟನೆಯನ್ನು ಖಂಡಿಸಿ, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಜುಲೈ 27 ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಾದ್ಯಂತ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago