Featured

ಕಾಪು : ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಪೊಲೀಸ್ ವರಿಷ್ಠಾಧಿಕಾರಿಯಿಂದ  ಬೇಜವಾಬ್ದಾರಿಯ ಹೇಳಿಕೆ : ಶಿಲ್ಪಾ ಜಿ. ಸುವರ್ಣ – Vishwanews24

ಕಾಪು : ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಪೊಲೀಸ್ ವರಿಷ್ಠಾಧಿಕಾರಿಯಿಂದ  ಬೇಜವಾಬ್ದಾರಿಯ ಹೇಳಿಕೆ : ಶಿಲ್ಪಾ ಜಿ. ಸುವರ್ಣ

ಕಾಪು : ಉಡುಪಿಯ ನೇತ್ರ ಜ್ಯೋತಿ ಪ್ಯಾರ ಮೇಡಿಕಲ್ ಕಾಲೇಜ್ ನಲ್ಲಿ ವಿಕೃತ ಮನಸ್ಸಿನ ಮೂವರು ವಿದ್ಯಾರ್ಥಿನಿಯರಿಂದ ನಡೆದ ವಿಡಿಯೋ ಚಿತ್ರೀಕರಣ ಘಟನೆ ಖಂಡನೀಯವಾಗಿದೆ. ಒಬ್ಬ ಮಹಿಳೆಯಾಗಿ,ಹೆಣ್ಣು ಮಗಳ ತಾಯಿಯಾಗಿ ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ನಡೆಸಿರುವ ಘಟನೆಯ ಬಗ್ಗೆ ತಿಳಿದಾಗ ನಮ್ಮ ಉಡುಪಿಯಲ್ಲಿ ಕೂಡ ಇಂತಹ ಮಾನಸಿಕತೆಯ ವಿದ್ಯಾರ್ಥಿನಿಯರು ಇದ್ದಾರೆಯೇ ಎಂಬ ಪ್ರಶ್ನೆ ಮನಸ್ಸಿನಲ್ಲಿ ಬಂದಿದೆ. ಕಾಲೇಜು ಆಡಳಿತ ಮಂಡಳಿ ತಪ್ಪಿತಸ್ಥ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿ ಅವರಿಂದ ವಶ ಪಡಿಸಿಕೊಂಡ ಮೊಬೈಲನ್ನು ಪೊಲೀಸ್ ಇಲಾಖೆಗೆ ನೀಡಿದ್ದೇವೆ ಎಂದು ಹೇಳುತ್ತಾರೆ. ಆದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯವರು ನಮಗೆ ಘಟನೆಯ ಬಗ್ಗೆ ಗೊತ್ತಿಲ್ಲ ಎಂದು ಹೇಳುತ್ತಾರೆ. ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಂತಹ ಬೇಜವಾಬ್ದಾರಿಯ ಹೇಳಿಕೆಯ ಹಿಂದಿನ ಗುಟ್ಟೇನು ? ಎನ್ನುವುದು ಬಹಿರಂಗಗೊಳ್ಳಬೇಕಿದೆ. ಸಂಬಂಧ ಪಟ್ಟ ಪೊಲೀಸ್ ಇಲಾಖೆಯವರು ಇನ್ನಾದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಹೇಯ ಕೃತ್ಯ ನಡೆಸಿರುವ ಮೂವರು ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ.

ಈ ಘಟನೆಯನ್ನು ಖಂಡಿಸಿ, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಜುಲೈ 27 ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಾದ್ಯಂತ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

10 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago