ಕಾಪು : ಉಡುಪಿಯ ನೇತ್ರ ಜ್ಯೋತಿ ಪ್ಯಾರ ಮೇಡಿಕಲ್ ಕಾಲೇಜ್ ನಲ್ಲಿ ವಿಕೃತ ಮನಸ್ಸಿನ ಮೂವರು ವಿದ್ಯಾರ್ಥಿನಿಯರಿಂದ ನಡೆದ ವಿಡಿಯೋ ಚಿತ್ರೀಕರಣ ಘಟನೆ ಖಂಡನೀಯವಾಗಿದೆ. ಒಬ್ಬ ಮಹಿಳೆಯಾಗಿ,ಹೆಣ್ಣು ಮಗಳ ತಾಯಿಯಾಗಿ ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು ನಡೆಸಿರುವ ಘಟನೆಯ ಬಗ್ಗೆ ತಿಳಿದಾಗ ನಮ್ಮ ಉಡುಪಿಯಲ್ಲಿ ಕೂಡ ಇಂತಹ ಮಾನಸಿಕತೆಯ ವಿದ್ಯಾರ್ಥಿನಿಯರು ಇದ್ದಾರೆಯೇ ಎಂಬ ಪ್ರಶ್ನೆ ಮನಸ್ಸಿನಲ್ಲಿ ಬಂದಿದೆ. ಕಾಲೇಜು ಆಡಳಿತ ಮಂಡಳಿ ತಪ್ಪಿತಸ್ಥ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿ ಅವರಿಂದ ವಶ ಪಡಿಸಿಕೊಂಡ ಮೊಬೈಲನ್ನು ಪೊಲೀಸ್ ಇಲಾಖೆಗೆ ನೀಡಿದ್ದೇವೆ ಎಂದು ಹೇಳುತ್ತಾರೆ. ಆದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯವರು ನಮಗೆ ಘಟನೆಯ ಬಗ್ಗೆ ಗೊತ್ತಿಲ್ಲ ಎಂದು ಹೇಳುತ್ತಾರೆ. ಜಿಲ್ಲೆಯಲ್ಲಿ ಇಂತಹ ಗಂಭೀರ ಘಟನೆ ನಡೆದರೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಂತಹ ಬೇಜವಾಬ್ದಾರಿಯ ಹೇಳಿಕೆಯ ಹಿಂದಿನ ಗುಟ್ಟೇನು ? ಎನ್ನುವುದು ಬಹಿರಂಗಗೊಳ್ಳಬೇಕಿದೆ. ಸಂಬಂಧ ಪಟ್ಟ ಪೊಲೀಸ್ ಇಲಾಖೆಯವರು ಇನ್ನಾದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಹೇಯ ಕೃತ್ಯ ನಡೆಸಿರುವ ಮೂವರು ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ.
ಈ ಘಟನೆಯನ್ನು ಖಂಡಿಸಿ, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಜುಲೈ 27 ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಾದ್ಯಂತ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…