Featured

ಕಾಪು : ಜಿಲ್ಲೆಯಲ್ಲಿ ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾದಿಕಾರಿ ಜಿ. ಜಗದೀಶ್ -Vishwanews24

ಕಾಪು : ಜಿಲ್ಲೆಯಲ್ಲಿ ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾದಿಕಾರಿ ಜಿ. ಜಗದೀಶ್ -Vishwanews24

ಕಾಪು : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದು, ಜನ ಮತ್ತೊಮ್ಮೆ ಮೈಮರೆತರೆ ತಾವಾಗಿಯೇ ಲಾಕ್‌ಡೌನ್‌ನ ಸುಳಿಯೊಳಗೆ ಸಿಲುಕಿ ಕೊಳ್ಳುವ ಅನಿವಾರ್ಯತೆ ಎದುರಾಗಬಹದು. ನಮ್ಮ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಬೇಕೇ ? ಬೇಡವೇ ? ಎನ್ನುವುದನ್ನು ಸ್ವತಃ ಜಿಲ್ಲೆಯ ಜನರೇ ನಿರ್ಧರಿಸಬೇಕಿದೆ ಎಂದು ಉಡುಪಿ ಜಿಲ್ಲಾದಿಕಾರಿ ಜಿ. ಜಗದೀಶ್ ಹೇಳಿದರು.

ಕಳತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ೧೦೦ರ ಆಸುಪಾಸಿನಲ್ಲಿ ಕೊರೊನಾ ಪಾಸಿಟಿವ್ ಕೇಸ್‌ಗಳು ಬರುತ್ತಿದ್ದವು. ಪಾಸಿಟಿವಿಟಿ ದರ ಶೇ. ೨ ರಿಂದ ೩ರ ಆಸುಪಾಸಿನಲ್ಲಿತ್ತು. ಆದರೆ ಕಳೆದ ೩-೪ ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು ಶೇ. ೪ ರಿಂದ ೪.೫ರವರೆಗೆ ಏರುತ್ತಿದೆ. ಒಂದೆರಡು ದಿನಗಳಲ್ಲಿ ಆಗಿರುವ ಬೆಳವಣಿಗೆಗಳನ್ನು ನೋಡಿಕೊಂಡು ಏನೂ ಹೇಳಲಾಗದು. ಮತ್ತೆ ಪಾಸಿಟಿವಿಟಿ ದರ ಏರಿಕೆಯಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾದೀತು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ ಎಲ್ಲವೂ ಓಪನ್ ಆಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಹಾರಾಷ್ಟ್ರ ಮತ್ತು ಕೇರಳದ ನಡುವೆ ಜಿಲ್ಲೆಗೆ ನಿಕಟ ಸಂಪರ್ಕ ಹೊಂದಿರುವುದರಿಂದ ಕೊರೊನಾ ಪ್ರಕರಣಗಳು ಮತ್ತೆ ಏರಿಕೆಯಾಗುವಂತಾಗಿದೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬೇಕಾದ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಕಠಿಣ ನಿಯಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ಬದ್ಧವಿದೆ ಎಂದರು.

ಸಾರ್ವಜನಿಕ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಪಾಲನೆ ಸಹಿತವಾಗಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಸರಕಾರದ ಮುನ್ಸೂಚನೆಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ.ಪ್ರತೀ ಸ್ಥಳದಲ್ಲೂ ಅದಿಕಾರಿಗಳೇ ಬಂದು ಹೇಳಬೇಕಾಗಿಲ್ಲ. ಸಾರ್ವಜನಿಕರಿಗೂ ಜವಾಬ್ದಾರಿಯಿದೆ. ತಮ್ಮ ಆರೋಗ್ಯದ ರಕ್ಷಣೆಗೆ ತಾವೇ ಯೋಚನೆ ಮಾಡಬೇಕಿದೆ ಎಂದರು.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

17 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

54 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago