Featured

ಕಾಪು: ಜುಗಾರಿ ಅಡ್ಡೆಗೆ ದಾಳಿ : 32 ಮಂದಿ ಬಂಧನ – Vishwanews24

ಕಾಪು: ಜುಗಾರಿ ಅಡ್ಡೆಗೆ ದಾಳಿ : 32 ಮಂದಿ ಬಂಧನ

ಕಾಪು : ಉಳಿಯಾರಗೋಳಿ- ಕಲ್ಯಾದ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್‌ ಬಾಹರ್‌ ಇಸ್ಪೀಟ್‌ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಜುಗಾರಿ ನಿರತ 32 ಮಂದಿಯನ್ನು ಬಂಧಿಸಿ, 3.37 ಲಕ್ಷ ರೂ. ನಗದು ಸಹಿತ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಜುಗಾರಿ ನಿರತರಾಗಿದ್ದ ಸಂಪತ್‌, ಸೂರಜ್‌, ಹೇಮಚಂದ್ರ, ಪ್ರಶಾಂತ್‌ ಸುವರ್ಣ, ಬಿಕೆಟ್‌, ಅಕ್ಷಯ್‌, ಯಂಕಪ್ಪ, ಸಿದ್ದೀಕ್‌, ರಾಜೇಶ್‌, ಸತೀಶ್‌, ರತ್ನಾಕರ್‌ ಶೆಟ್ಟಿ, ನಾರಾಯಣ, ವಿಶ್ವನಾಥ, ವಿನೋದ್‌, ಅಶ್ರಫ್‌, ವಿನಯ್‌, ಶಶಿ ಕುಮಾರ್‌, ಕಿಶೋರ್‌, ರಾಧಾಕೃಷ್ಣ, ಪ್ರಿತೇಶ, ಮಣಿಕಂಠ, ಚೇತನ್‌, ಚರಣ್‌, ಅಶ್ವತ್‌, ರಕ್ಷಿತ್‌, ಪಾಂಡು ಟಿ., ಅನ್ವರ್‌, ಸಂತೋಷ್‌, ಅರ್ಪಿತ್‌, ಪ್ರಜ್ವಲ್‌, ಪ್ರಶಾಂತ್‌, ಬೋಜರಾಜ್‌ ಅವರನ್ನು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್‌ ನಿರೀಕ್ಷಕ ದೇವರಾಜ್‌ ಅವರಿಗೆ ದೊರಕಿದ ಮಾಹಿತಿಯ ಮೇರೆಗೆ ಕಾಪು ಪೊಲೀಸ್‌ ಠಾಣಾ ಸಿಬಂದಿಯವರೊಂದಿಗೆ ಜತೆಗೂಡಿ ಜುಗಾರಿ ಆಡ್ಡೆಗೆ ದಾಳಿ ನಡೆಸಿದ್ದು ಈ ವೇಳೆ 3,37,400/- ರೂ. ನಗದು ಹಣ, ಇಸ್ಪೀಟ್‌ ಜುಗಾರಿ ಆಟ ಆಡಲು ಬಳಸಿದ 4 ಸೆಟ್‌ ವಿವಿಧ ಬಣ್ಣಗಳ ಇಸ್ಪೀಟ್‌ ಎಲೆಗಳು, 37 ಮೊಬೈಲ್‌ ಫೋನ್‌ಗಳು, 7 ಕಾರುಗಳು, 6 ಮೋಟಾರ್‌ ಸೆ„ಕಲ್‌, 2 ಆಟೋ ರಿಕ್ಷಾ ಸ್ವಾಧೀನಪಡಿಸಿಕೊಂಡಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

52 minutes ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

56 minutes ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

1 hour ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

1 hour ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago