ಕಾಪು : ಉಳಿಯಾರಗೋಳಿ- ಕಲ್ಯಾದ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಜುಗಾರಿ ನಿರತ 32 ಮಂದಿಯನ್ನು ಬಂಧಿಸಿ, 3.37 ಲಕ್ಷ ರೂ. ನಗದು ಸಹಿತ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಜುಗಾರಿ ನಿರತರಾಗಿದ್ದ ಸಂಪತ್, ಸೂರಜ್, ಹೇಮಚಂದ್ರ, ಪ್ರಶಾಂತ್ ಸುವರ್ಣ, ಬಿಕೆಟ್, ಅಕ್ಷಯ್, ಯಂಕಪ್ಪ, ಸಿದ್ದೀಕ್, ರಾಜೇಶ್, ಸತೀಶ್, ರತ್ನಾಕರ್ ಶೆಟ್ಟಿ, ನಾರಾಯಣ, ವಿಶ್ವನಾಥ, ವಿನೋದ್, ಅಶ್ರಫ್, ವಿನಯ್, ಶಶಿ ಕುಮಾರ್, ಕಿಶೋರ್, ರಾಧಾಕೃಷ್ಣ, ಪ್ರಿತೇಶ, ಮಣಿಕಂಠ, ಚೇತನ್, ಚರಣ್, ಅಶ್ವತ್, ರಕ್ಷಿತ್, ಪಾಂಡು ಟಿ., ಅನ್ವರ್, ಸಂತೋಷ್, ಅರ್ಪಿತ್, ಪ್ರಜ್ವಲ್, ಪ್ರಶಾಂತ್, ಬೋಜರಾಜ್ ಅವರನ್ನು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಅವರಿಗೆ ದೊರಕಿದ ಮಾಹಿತಿಯ ಮೇರೆಗೆ ಕಾಪು ಪೊಲೀಸ್ ಠಾಣಾ ಸಿಬಂದಿಯವರೊಂದಿಗೆ ಜತೆಗೂಡಿ ಜುಗಾರಿ ಆಡ್ಡೆಗೆ ದಾಳಿ ನಡೆಸಿದ್ದು ಈ ವೇಳೆ 3,37,400/- ರೂ. ನಗದು ಹಣ, ಇಸ್ಪೀಟ್ ಜುಗಾರಿ ಆಟ ಆಡಲು ಬಳಸಿದ 4 ಸೆಟ್ ವಿವಿಧ ಬಣ್ಣಗಳ ಇಸ್ಪೀಟ್ ಎಲೆಗಳು, 37 ಮೊಬೈಲ್ ಫೋನ್ಗಳು, 7 ಕಾರುಗಳು, 6 ಮೋಟಾರ್ ಸೆ„ಕಲ್, 2 ಆಟೋ ರಿಕ್ಷಾ ಸ್ವಾಧೀನಪಡಿಸಿಕೊಂಡಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…