ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ ಹಳೆ ಮಾರಿಗುಡಿ ಪರಿಸರದಲ್ಲಿ ಹಲಸು ಮತ್ತು ಮಾವಿನ ಮೇಳ ಜೂನ್ 12ರಿಂದ 14ರವರೆಗೆ ಆಯೋಜಿಸಲಾಗಿದೆ.
ಶುಕ್ರವಾರ ಹಲಸು- ಮಾವಿನ ಮೇಳದ ಭಿತ್ತಿಪತ್ರ ಬಿಡುಗಡೆಗೊಳಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಬಳಲುತ್ತಿರುವ ಸ್ಥಳೀಯ ರೈತರಿಗೆ ನೇರ ಮಾರುಕಟ್ಟೆ ಕಲ್ಪಿಸಿ, ತಾವೇ ಬೆಳೆದ ವಿವಿಧ ತಳಿಯ ಹಲಸು, ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ವೇದಿಕೆ ಒದಗಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:
ಮೇಳದಲ್ಲಿ ಹಲಸು ಮತ್ತು ಮಾವಿನಿಂದ ತಯಾರಿಸಬಹುದಾದ ವಿವಿಧ ಖಾದ್ಯಗಳು, ಹಪ್ಪಳ, ಉಪ್ಪಿನಕಾಯಿ, ಜೂಸ್ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸು, ಮಾವಿಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಬೇಡಿಕೆ ಇದೆ. ಸ್ಥಳೀಯ ರೈತರ ಆರ್ಥಿಕ ಶಕ್ತಿ ಹೆಚ್ಚಿಸುವುದು, ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಹೊಸ ಅವಕಾಶಗಳನ್ನು ಪರಿಚಯಿಸುವುದು ಮೇಳದ ಉದ್ದೇಶ ಎಂದು ತಿಳಿಸಿದರು.
ಸಂಘಟಕ ಗುರುಪ್ರಸಾದ್ ಮಾತನಾಡಿ, ವಿವಿಧ ಭಾಗಗಳಿಂದ ಸುಮಾರು 70 ಮಳಿಗೆಗಳು ಇರಲಿವೆ. ಅಪರೂಪದ, ರುಚಿಕರ ವಿವಿಧ ತಳಿಯ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ, ಮಾರಾಟ ನಡೆಯಲಿದೆ. ಕೃಷಿ ತಜ್ಞರಿಂದ ಆಧುನಿಕ ಕೃಷಿ ಪದ್ಧತಿ, ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…