ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ ಹಳೆ ಮಾರಿಗುಡಿ ಪರಿಸರದಲ್ಲಿ ಹಲಸು ಮತ್ತು ಮಾವಿನ ಮೇಳ ಜೂನ್ 12ರಿಂದ 14ರವರೆಗೆ ಆಯೋಜಿಸಲಾಗಿದೆ.
ಶುಕ್ರವಾರ ಹಲಸು- ಮಾವಿನ ಮೇಳದ ಭಿತ್ತಿಪತ್ರ ಬಿಡುಗಡೆಗೊಳಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಬಳಲುತ್ತಿರುವ ಸ್ಥಳೀಯ ರೈತರಿಗೆ ನೇರ ಮಾರುಕಟ್ಟೆ ಕಲ್ಪಿಸಿ, ತಾವೇ ಬೆಳೆದ ವಿವಿಧ ತಳಿಯ ಹಲಸು, ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ವೇದಿಕೆ ಒದಗಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:
ಮೇಳದಲ್ಲಿ ಹಲಸು ಮತ್ತು ಮಾವಿನಿಂದ ತಯಾರಿಸಬಹುದಾದ ವಿವಿಧ ಖಾದ್ಯಗಳು, ಹಪ್ಪಳ, ಉಪ್ಪಿನಕಾಯಿ, ಜೂಸ್ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸು, ಮಾವಿಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಬೇಡಿಕೆ ಇದೆ. ಸ್ಥಳೀಯ ರೈತರ ಆರ್ಥಿಕ ಶಕ್ತಿ ಹೆಚ್ಚಿಸುವುದು, ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಹೊಸ ಅವಕಾಶಗಳನ್ನು ಪರಿಚಯಿಸುವುದು ಮೇಳದ ಉದ್ದೇಶ ಎಂದು ತಿಳಿಸಿದರು.
ಸಂಘಟಕ ಗುರುಪ್ರಸಾದ್ ಮಾತನಾಡಿ, ವಿವಿಧ ಭಾಗಗಳಿಂದ ಸುಮಾರು 70 ಮಳಿಗೆಗಳು ಇರಲಿವೆ. ಅಪರೂಪದ, ರುಚಿಕರ ವಿವಿಧ ತಳಿಯ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ, ಮಾರಾಟ ನಡೆಯಲಿದೆ. ಕೃಷಿ ತಜ್ಞರಿಂದ ಆಧುನಿಕ ಕೃಷಿ ಪದ್ಧತಿ, ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.
ಇದನ್ನೂ ಓದಿ:
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…