ಕಾಪು: ರಾಜ್ಯದಲ್ಲಿ ಆಡಳಿತ ನಡೆಸಿರುವ ಎರಡೂ ರಾಷ್ಟ್ರೀಯ ಪಕ್ಷಗಳೂ ಜನ ವಿರೋಧಿಯಾಗಿದ್ದು, ಇವರ ಆಡಳಿತದ ಸರಕಾರ ಜನರ ನಿರೀಕ್ಷೆಗಳನ್ನು ಹುಸಿ ಗೊಳಿಸಿದೆ. ಇಂತಹ ಸಂದರ್ಭದಲ್ಲಿ ಜನ ಮತ್ತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ 20 ತಿಂಗಳ ಅವಧಿಯ ಸರಕಾರವನ್ನು ನೆನಪಿಸಿ ಕೊಳ್ಳುತ್ತಿದ್ದು, ಜೆಡಿಎಸ್ನ್ನು ಮರಳಿ ಅಧಿಕಾರಕ್ಕೆ ತರಲು ಜನರೇ ನಿರ್ಧರಿಸಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಹೇಳಿದರು.
ಕಾಪು ಮಹಾಬಲ ಮಾಲ್ನಲ್ಲಿ ಬುಧವಾರ ಜೆಡಿಎಸ್ನ ಕ್ಷೇತ್ರ ಚುನಾವಣಾ ಕಚೇರಿ ಉದ್ಘಾಟಿಸಿ, ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜನತಾದರ್ಶನ, ಗ್ರಾಮ ವಾಸ್ತವ್ಯದ ಮೂಲಕ ಕರಾವಳಿ ಜನರ ಬದುಕಿನ ಅಧ್ಯಯನ ನಡೆಸಿದ್ದ ಕುಮಾರಸ್ವಾಮಿ ಅವರು ಎಲ್ಲಾ ವರ್ಗದ ಜನರ ಮನಗೆದ್ದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ನಿಂದ 4 ಕಡೆ ಮತ್ತು ಬಿಎಸ್ಪಿ 1 ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದ್ದು, ಜೆಡಿಎಸ್ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಕಾಪುವಿನಲ್ಲಿ ಎಲ್ಲ ವರ್ಗದವರ ಬೆಂಬಲದೊಂದಿಗೆ ನಮಗೂ ಗೆಲುವಿನ ವಿಶ್ವಾಸವಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ಮಾತನಾಡಿ, ಅಲ್ಪಸಂಖ್ಯಾಕರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ಬರುತ್ತಿರುವ ಕಾಂಗ್ರೆಸ್ ಉಡುಪಿ ಜಿಲ್ಲೆಯಲ್ಲಿ ಕನಿಷ್ಠ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ತಾ.ಪಂ., ಜಿ.ಪಂ. ಅಥವಾ ಅದಕ್ಕಿಂತ ಮೇಲಿನ ಸ್ತರದ ಜನಪ್ರತಿನಿಧಿಯನ್ನಾಗಿ ಆರಿಸುವತ್ತ ಗಮನಹರಿಸಿಲ್ಲ. ಇನ್ನು ಬಿಜೆಪಿ ಕೇವಲ ಹಿಂದೂಗಳ ಓಲೈಕೆಯಲ್ಲಿ ಮುಳುಗಿದೆ. ಎರಡೂ ಪಕ್ಷಗಳನ್ನು ತಿರಸ್ಕರಿಸಿ ಜೆಡಿಎಸ್ನ್ನು ಬೆಂಬಲಿಸಲು ಜನತೆ ತೀರ್ಮಾನಿಸಿದ್ದಾರೆ. ಜೆಡಿಎಸ್ನ ನಾಯಕರ ತ್ಯಾಗ ದಿಂದಾಗಿ ತನಗೆ ಸ್ಪರ್ಧಿಸಲು ಅವಕಾಶ ದೊರಕಿದ್ದು, ಈ ಅವಕಾಶವನ್ನು ಜನಸೇವೆಗೆ ದೊರಕಿದ ದೊಡ್ಡ ಅವಕಾಶವೆಂದು ತಿಳಿದು ಸದುಪಯೋಗ ಪಡಿಸಿಕೊಳ್ಳುವುದಾಗಿ ಭರವಸೆ ನೀಡಿದರು.
ಕಾಪು ಬ್ಲಾಕ್ ಜೆಡಿಎಸ್ ಅಧ್ಯಕ್ಷ ಸುಧಾಕರ ಶೆಟ್ಟಿ ಹೆಜಮಾಡಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಶೇಖರ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪಕ್ಷದ ಮುಖಂಡರಾದ ಶಾಲಿನಿ ಶೆಟ್ಟಿ ಕೆಂಚನೂರು, ಉದಯ್ ಹೆಗ್ಡೆ, ದಿಲ್ಲೇಶ್ ಶೆಟ್ಟಿ, ಮಹಮ್ಮದ್ ಹ್ಯಾರಿಸ್ ಮೊದಲಾದವರು ಉಪಸ್ಥಿತರಿದ್ದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಯೂಸುಫ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…