ಕಾಪು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್, ಕೃತಕ ಅಂಗಾಂಗ ತಯಾರಿಕೆ ಸಂಸ್ಥೆ ( ಅಲಿಂಕೋ) ಜಿಲ್ಲಾಡಳಿತ ಜಿಲ್ಲಾ ವಿಶೇಷ ಚೇತನ ಪುನರ್ವಸತಿ ಕೇಂದ್ರ ರೆಡ್ ಕ್ರಾಸ್ ಸೊಸೈಟಿ ಉಡುಪಿ ಮತ್ತು ಜೇಸಿಐ ಕಾಪು ಸಹಯೋಗದಲ್ಲಿ ಕಾಪು ಜೇಸಿಐ ಸಭಾ ಭವನದಲ್ಲಿ ವಿಶೇಷ ಚೇತನರಿಗೆ ಕೃತಕ ಅವಯವ ಉಪಕರಣಗಳ ವಿತರಣೆ ಜರುಗಿತು.
ಈ ಸಂದರ್ಭ ಮಾತನಾಡಿದ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ವಿಶೇಷಚೇತನರನ್ನು ಯಾರೂ ನಿರ್ಲಕ್ಷಿಸಬಾರದು. ಅವರು ಸಾಕಷ್ಟು ಪ್ರತಿಭಾ ಸಂಪನ್ನರಾಗಿದ್ದು, ಸಾಧನೆಯ ಮುಂಚೂಣಿಯಲ್ಲಿದ್ದಾರೆ. ಹಿರಿಯರು ಹಾಗೂ ವಿಶೇಷಚೇತನರನ್ನು ಗೌರವಿಸಿ, ಅವರ ಸೇವೆಗೈಯ್ಯುವ ಮನಸ್ಸು ನಮ್ಮದಾಗಬೇಕೆಂದು ಹೇಳಿದರು.
ಜಿಲ್ಲೆಯ ಒಟ್ಟು ಆರು ತಾಲೂಕುಗಳಲ್ಲಿ ಸುಮಾರು 512 ಫಲಾನುಭವಿಗಳಿಗೆ 45 ಲಕ್ಷ ರೂ. ವೆಚ್ಚದ ಸಲಕರಣೆ ವಿತರಿಸಲಾಗಿದ್ದು, ಕಾಪುವಿನಲ್ಲಿ 25 ವಿಶೇಷಚೇತನರಿಗೆ ಕೃತಕ ಉಪಕರಣ ವಿತರಿಸಲಾಯಿತು.
ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಚಂದ್ರ ನಾಯಕ, ಶಾರದೇಶ್ವರಿ ಗುರ್ಮೆ,ನೋಡಲ್ ಅಧಿಕಾರಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಜೇಸಿಐ ರಾಕೇಶ್ ಕುಂಜೂರು ನಿರೂಪಿಸಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…