ಕಾಪು: ಶ್ರೀನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ 25ನೇ ಶ್ರೀನಾರಾಯಣ ಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಯೋಮಿತಿ ವಿಭಾಗದ ಮಿಂಚಿನ ಚೆಸ್ ಟೂರ್ನಿ ಜನವರಿ 5ರಂದು ಕಾಪುವಿನ ಹಳೇ ಮಾರಿಯಮ್ಮ ಸಭಾಭವನದಲ್ಲಿ ನಡೆಯಲಿದೆ.
ಮಕ್ಕಳ ವಿಭಾಗದಲ್ಲಿ ವಯೋಮಿತಿ 7, 9, 11, 13, 17 ವರ್ಷಗಳ ವಿಭಾಗವಿದ್ದು, ಪ್ರತಿ ವಿಭಾಗದಲ್ಲಿ ಬಾಲಕರಿಗೆ 10 ಹಾಗೂ ಬಾಲಕಿಯರಿಗೆ 7 ಬಹುಮಾನಗಳಿವೆ. ಮುಕ್ತ ವಿಭಾಗದಲ್ಲಿ 15 ನಗದು ಬಹುಮಾನವಿದ್ದು, 5 ಹಿರಿಯ ಆಟಗಾರ ರಿಗೆ, 5 ಮಹಿಳಾ ಆಟಗಾರರಿಗೆ ಹಾಗೂ ಉತ್ತಮ ಶಾಲೆಗೂ ಬಹುಮಾನವಿದೆ.
ಟೂರ್ನಿಯನ್ನು ಮಂಗಳೂರು ಮಂಗಳೂರಿನ ಹಾರ್ಟ್ ಸ್ಕ್ಯಾನ್ ಫೌಂಡೇಶನ್ನ ಹೃದ್ರೋಗ ತಜ್ಞ ಡಾ. ಮುಕುಂದ ಕುಂಬಳೆ ಉದ್ಘಾಟಿಸಲಿದ್ದು, ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಸಾದ್ ಶೆಣ್ಣೆ ಅಧ್ಯಕ್ಷತೆ ವಹಿಸಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಂಗಳೂರಿನ ಸಾಮ್ರಾಟ್ ಚೆಸ್ ಯುನಿಟ್ನ ಕಾರ್ಯದರ್ಶಿ ನಾಗೇಶ್ ಕಾರಂತ್, ಲಕ್ಷ್ಮೀನಾರಾಯಣ ಆಚಾರ್ಯ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ಕಾಪು ಗುರಿಕಾರರಾದ ಸುಧಾಕರ ಸಾಲ್ಯಾನ್ ಭಾಗವಹಿಸಲಿದ್ದು, ಬೈಲೂರು ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕಿ ಜ್ಯೋತಿ, ಕಾಪು ಬಿಲ್ಲವರ ಸಂಘದ ಕಾರ್ಯದರ್ಶಿ ವಿಠಲ ಸಾಲ್ಯಾನ್ ಹಾಗೂ ಪಾಂಗಾಳದ ಪೆನ್ವಿಲ್ ಸೋನ್ಸ್ ಭಾಗವಹಿಸಲಿದ್ದಾರೆ.
ಟೂರ್ನಿ ಕುರಿತ ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 9341111024ನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ಉಮಾನಾಥ ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…