ಕಾಪು : ತೀರ್ಥಹಳ್ಳಿಯಿಂದ ಕೇರಳಕ್ಕೆ ಮರದ ತುಂಡು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ೬೬ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಘಟನೆ ಸಂಂಭವಿಸಿದ್ದು ಟಯರ್ ಸ್ಪೋಟಗೊಂಡು ಮರದ ದಿಮ್ಮಿಗೆ ಬೆಂಕಿ ಹತ್ತಿತ್ತು.
ಬೆಂಕಿಯ ಕೆನ್ನಾಲಗೆ ಲಾರಿಯತ್ತ ಚಾಚುತ್ತಿದ್ದಂತೆಯೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ಪೊಲೀಸ್ ಠಾಣೆಗೆ ಸುದ್ಧಿ ಮುಟ್ಟಿಸಿದ್ದು ಪೊಲೀಸರು ಅಗ್ನಿಶಾಮಕದಳಕ್ಕೆ ಮಾಹಿತಿ ರವಾನಿಸಿದ್ದರು.
ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮ. 3 ಕಡೆ ಆಸ್ತಿ ಮುಟ್ಟುಗೋಲು – Vishwanews24
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬಂದಿಗಳು ಮತ್ತು ಪೊಲೀಸರು ಜೊತೆಗೂಡಿ ಬೆಂಕಿಯನ್ನು ನಂದಿಸಿದ್ದು ಭಾರೀ ಪ್ರಮಾಣದ ಅವಘಡವೊಂದು ತಪ್ಪಿದಂತಾಗಿದೆ. ಘಟನೆಯಿಂದಾಗಿ ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿದ್ದು ಲಾರಿ ಕೂಡಾ ಹಾನಿಗೊಳಗಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…