Featured

ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ  – vishwanews24

ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ

ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ ಪಾಂಗಾಳ ತುಂಗೆರಬೈಲು ಲಕ್ಷ್ಮಣ ಪೂಜಾರಿ ಹಾಗೂ ಅವರ ಕುಟುಂಬಕ್ಕಾಗಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಲಾದ ‘ಕುಶಲ ನಿವಾಸ’ ಎಂಬ ನೂತನ ಮನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು, ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವುದು ಜೀವನದ ಅತೀ ದೊಡ್ಡ ಸೇವೆ. ಸಮಾಜದಲ್ಲಿ ದಾನಿಗಳು ಎಲ್ಲಾ ಕಡೆಗಳಲ್ಲೂ ಇರುತ್ತಾರೆ. ಆದರೆ ಆ ದಾನಿಗಳು ನೀಡುವ ದೇಣಿಗೆಯನ್ನು ಸಮರ್ಪಕವಾಗಿ ಬಳಸಿಕೊಂಡು ಜನ ಮೆಚ್ಚುವ ಸೇವೆ ನೀಡುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಇನ್ನಂಜೆ ರೋಟರಿ ಸಮುದಾಯ ದಳದ ಸದಸ್ಯರು ಜೊತೆಗೂಡಿ ಮಾಡಿರುವ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಸಹಾಯಕ ಗವರ್ನರ್ ವಿಶ್ಲೇಶ್ ಶೆಣೈ, ರೋಟರಿ ಸಮುದಾಯದಳದ ಉಪಸಭಾಪತಿ ಗುರುಪ್ರಸಾದ್ ಕಾಮತ್, ಶಂಕರಪುರ ರೋಟರಿ ಕ್ಲಬ್ ಅಧ್ಯಕ್ಷೆ ಪ್ಯಾಟ್ರಿಕ್ ಡಿ. ಸೋಜ ಶುಭಾಶಂಸನೆಗೈದರು.
ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.

ಇನ್ನಂಜೆ ರೋಟರಿ ಸಮುದಾಯ ದಳದ ಪೂರ್ವಾದ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ರವಿಪ್ರಸಾದ್ ಪೂಜಾರಿ, ಕಾರ್ಯದರ್ಶಿ ಗಣೇಶ್ ಆಚಾರ್ಯ, ಇನ್ನಂಜೆ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಊರಿನ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟರ್ಪಾಲಿನ ಮನೆಗೆ ಮುಕ್ತಿ
ಪಾಂಗಾಳ ತುಂಗರಬೈಲು ನಿವಾಸಿ, ಲಕ್ಷ್ಮಣ ಪೂಜಾರಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಅಸಹಾಯಕ ರೀತಿಯಲ್ಲಿ ಟರ್ಪಾಲಿನ ಮನೆಯಲ್ಲಿ ಬದುಕುತ್ತಿದ್ದರು. ಅದೆಷ್ಟೋ ವರ್ಷಗಳ ಕಾಲ ಗಾಳಿ-ಮಳೆಗೆ ಮೈಯೊಡ್ಡಿ ದಿನ ಕಳೆಯುತ್ತಿದ್ದ ಕುಟುಂಬದ ನೆರವಿಗೆ ಬಂದ ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಅವರು, ಇನ್ನಂಜೆ ರೋಟರಿ ಸಮುದಾಯ ದಳದ ಮೂಲಕ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಟ್ಯಾರೇಸ್ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago