ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ ಪಾಂಗಾಳ ತುಂಗೆರಬೈಲು ಲಕ್ಷ್ಮಣ ಪೂಜಾರಿ ಹಾಗೂ ಅವರ ಕುಟುಂಬಕ್ಕಾಗಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಲಾದ ‘ಕುಶಲ ನಿವಾಸ’ ಎಂಬ ನೂತನ ಮನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವುದು ಜೀವನದ ಅತೀ ದೊಡ್ಡ ಸೇವೆ. ಸಮಾಜದಲ್ಲಿ ದಾನಿಗಳು ಎಲ್ಲಾ ಕಡೆಗಳಲ್ಲೂ ಇರುತ್ತಾರೆ. ಆದರೆ ಆ ದಾನಿಗಳು ನೀಡುವ ದೇಣಿಗೆಯನ್ನು ಸಮರ್ಪಕವಾಗಿ ಬಳಸಿಕೊಂಡು ಜನ ಮೆಚ್ಚುವ ಸೇವೆ ನೀಡುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಇನ್ನಂಜೆ ರೋಟರಿ ಸಮುದಾಯ ದಳದ ಸದಸ್ಯರು ಜೊತೆಗೂಡಿ ಮಾಡಿರುವ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಸಹಾಯಕ ಗವರ್ನರ್ ವಿಶ್ಲೇಶ್ ಶೆಣೈ, ರೋಟರಿ ಸಮುದಾಯದಳದ ಉಪಸಭಾಪತಿ ಗುರುಪ್ರಸಾದ್ ಕಾಮತ್, ಶಂಕರಪುರ ರೋಟರಿ ಕ್ಲಬ್ ಅಧ್ಯಕ್ಷೆ ಪ್ಯಾಟ್ರಿಕ್ ಡಿ. ಸೋಜ ಶುಭಾಶಂಸನೆಗೈದರು.
ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಇನ್ನಂಜೆ ರೋಟರಿ ಸಮುದಾಯ ದಳದ ಪೂರ್ವಾದ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ರವಿಪ್ರಸಾದ್ ಪೂಜಾರಿ, ಕಾರ್ಯದರ್ಶಿ ಗಣೇಶ್ ಆಚಾರ್ಯ, ಇನ್ನಂಜೆ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಊರಿನ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟರ್ಪಾಲಿನ ಮನೆಗೆ ಮುಕ್ತಿ
ಪಾಂಗಾಳ ತುಂಗರಬೈಲು ನಿವಾಸಿ, ಲಕ್ಷ್ಮಣ ಪೂಜಾರಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಅಸಹಾಯಕ ರೀತಿಯಲ್ಲಿ ಟರ್ಪಾಲಿನ ಮನೆಯಲ್ಲಿ ಬದುಕುತ್ತಿದ್ದರು. ಅದೆಷ್ಟೋ ವರ್ಷಗಳ ಕಾಲ ಗಾಳಿ-ಮಳೆಗೆ ಮೈಯೊಡ್ಡಿ ದಿನ ಕಳೆಯುತ್ತಿದ್ದ ಕುಟುಂಬದ ನೆರವಿಗೆ ಬಂದ ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಅವರು, ಇನ್ನಂಜೆ ರೋಟರಿ ಸಮುದಾಯ ದಳದ ಮೂಲಕ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಟ್ಯಾರೇಸ್ ಮನೆ ನಿರ್ಮಿಸಿ ಕೊಟ್ಟಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…