ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ ಪಾಂಗಾಳ ತುಂಗೆರಬೈಲು ಲಕ್ಷ್ಮಣ ಪೂಜಾರಿ ಹಾಗೂ ಅವರ ಕುಟುಂಬಕ್ಕಾಗಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಲಾದ ‘ಕುಶಲ ನಿವಾಸ’ ಎಂಬ ನೂತನ ಮನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವುದು ಜೀವನದ ಅತೀ ದೊಡ್ಡ ಸೇವೆ. ಸಮಾಜದಲ್ಲಿ ದಾನಿಗಳು ಎಲ್ಲಾ ಕಡೆಗಳಲ್ಲೂ ಇರುತ್ತಾರೆ. ಆದರೆ ಆ ದಾನಿಗಳು ನೀಡುವ ದೇಣಿಗೆಯನ್ನು ಸಮರ್ಪಕವಾಗಿ ಬಳಸಿಕೊಂಡು ಜನ ಮೆಚ್ಚುವ ಸೇವೆ ನೀಡುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಇನ್ನಂಜೆ ರೋಟರಿ ಸಮುದಾಯ ದಳದ ಸದಸ್ಯರು ಜೊತೆಗೂಡಿ ಮಾಡಿರುವ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಸಹಾಯಕ ಗವರ್ನರ್ ವಿಶ್ಲೇಶ್ ಶೆಣೈ, ರೋಟರಿ ಸಮುದಾಯದಳದ ಉಪಸಭಾಪತಿ ಗುರುಪ್ರಸಾದ್ ಕಾಮತ್, ಶಂಕರಪುರ ರೋಟರಿ ಕ್ಲಬ್ ಅಧ್ಯಕ್ಷೆ ಪ್ಯಾಟ್ರಿಕ್ ಡಿ. ಸೋಜ ಶುಭಾಶಂಸನೆಗೈದರು.
ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಇನ್ನಂಜೆ ರೋಟರಿ ಸಮುದಾಯ ದಳದ ಪೂರ್ವಾದ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ರವಿಪ್ರಸಾದ್ ಪೂಜಾರಿ, ಕಾರ್ಯದರ್ಶಿ ಗಣೇಶ್ ಆಚಾರ್ಯ, ಇನ್ನಂಜೆ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಊರಿನ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟರ್ಪಾಲಿನ ಮನೆಗೆ ಮುಕ್ತಿ
ಪಾಂಗಾಳ ತುಂಗರಬೈಲು ನಿವಾಸಿ, ಲಕ್ಷ್ಮಣ ಪೂಜಾರಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಅಸಹಾಯಕ ರೀತಿಯಲ್ಲಿ ಟರ್ಪಾಲಿನ ಮನೆಯಲ್ಲಿ ಬದುಕುತ್ತಿದ್ದರು. ಅದೆಷ್ಟೋ ವರ್ಷಗಳ ಕಾಲ ಗಾಳಿ-ಮಳೆಗೆ ಮೈಯೊಡ್ಡಿ ದಿನ ಕಳೆಯುತ್ತಿದ್ದ ಕುಟುಂಬದ ನೆರವಿಗೆ ಬಂದ ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಅವರು, ಇನ್ನಂಜೆ ರೋಟರಿ ಸಮುದಾಯ ದಳದ ಮೂಲಕ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಟ್ಯಾರೇಸ್ ಮನೆ ನಿರ್ಮಿಸಿ ಕೊಟ್ಟಿದ್ದಾರೆ.
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…