Featured

ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ  – vishwanews24

ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ

ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ ಪಾಂಗಾಳ ತುಂಗೆರಬೈಲು ಲಕ್ಷ್ಮಣ ಪೂಜಾರಿ ಹಾಗೂ ಅವರ ಕುಟುಂಬಕ್ಕಾಗಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಲಾದ ‘ಕುಶಲ ನಿವಾಸ’ ಎಂಬ ನೂತನ ಮನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು, ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವುದು ಜೀವನದ ಅತೀ ದೊಡ್ಡ ಸೇವೆ. ಸಮಾಜದಲ್ಲಿ ದಾನಿಗಳು ಎಲ್ಲಾ ಕಡೆಗಳಲ್ಲೂ ಇರುತ್ತಾರೆ. ಆದರೆ ಆ ದಾನಿಗಳು ನೀಡುವ ದೇಣಿಗೆಯನ್ನು ಸಮರ್ಪಕವಾಗಿ ಬಳಸಿಕೊಂಡು ಜನ ಮೆಚ್ಚುವ ಸೇವೆ ನೀಡುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಇನ್ನಂಜೆ ರೋಟರಿ ಸಮುದಾಯ ದಳದ ಸದಸ್ಯರು ಜೊತೆಗೂಡಿ ಮಾಡಿರುವ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಸಹಾಯಕ ಗವರ್ನರ್ ವಿಶ್ಲೇಶ್ ಶೆಣೈ, ರೋಟರಿ ಸಮುದಾಯದಳದ ಉಪಸಭಾಪತಿ ಗುರುಪ್ರಸಾದ್ ಕಾಮತ್, ಶಂಕರಪುರ ರೋಟರಿ ಕ್ಲಬ್ ಅಧ್ಯಕ್ಷೆ ಪ್ಯಾಟ್ರಿಕ್ ಡಿ. ಸೋಜ ಶುಭಾಶಂಸನೆಗೈದರು.
ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.

ಇನ್ನಂಜೆ ರೋಟರಿ ಸಮುದಾಯ ದಳದ ಪೂರ್ವಾದ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ರವಿಪ್ರಸಾದ್ ಪೂಜಾರಿ, ಕಾರ್ಯದರ್ಶಿ ಗಣೇಶ್ ಆಚಾರ್ಯ, ಇನ್ನಂಜೆ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಊರಿನ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟರ್ಪಾಲಿನ ಮನೆಗೆ ಮುಕ್ತಿ
ಪಾಂಗಾಳ ತುಂಗರಬೈಲು ನಿವಾಸಿ, ಲಕ್ಷ್ಮಣ ಪೂಜಾರಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಅಸಹಾಯಕ ರೀತಿಯಲ್ಲಿ ಟರ್ಪಾಲಿನ ಮನೆಯಲ್ಲಿ ಬದುಕುತ್ತಿದ್ದರು. ಅದೆಷ್ಟೋ ವರ್ಷಗಳ ಕಾಲ ಗಾಳಿ-ಮಳೆಗೆ ಮೈಯೊಡ್ಡಿ ದಿನ ಕಳೆಯುತ್ತಿದ್ದ ಕುಟುಂಬದ ನೆರವಿಗೆ ಬಂದ ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಅವರು, ಇನ್ನಂಜೆ ರೋಟರಿ ಸಮುದಾಯ ದಳದ ಮೂಲಕ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಟ್ಯಾರೇಸ್ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago