ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಪು ಕ್ರೈಂ ಎಸ್ಸೈ ರಮೇಶ ನಾಯ್ಕ ಅವರು ಮಂಗಳವಾರ ಮುಂಜಾನೆ ರಾತ್ರಿ ರೌಂಡ್ಸ್ನಲ್ಲಿದ್ದಾಗ ಉಡುಪಿ ಕಡೆಗೆ ಬರುತ್ತಿದ್ದ ಟಿಪ್ಪರ್ನ ಬಾಡಿಯಿಂದ ನೀರು ಇಳಿಯುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿ ಮರಳನ್ನು ಸಾಗಿಸುತ್ತಿರಬಹುದು ಎಂಬ ಅನುಮಾನದಿಂದ ಟಿಪ್ಪರ್ನ ಚಾಲಕನಲ್ಲಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದಾಗ ಚಾಲಕನು ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದನು. ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಬಾಡಿಯ ಮಟ್ಟದವರೆಗೆ ಮರಳನ್ನು ತುಂಬಿಸಿರುವುದು, ಆ ಮರಳಿನಿಂದ ನೀರು ಇಳಿಯುತ್ತಿರುವುದು ಕಂಡು ಬಂದಿತ್ತು.
ಟಿಪ್ಪರ್ ಮತ್ತು ಅದರಲ್ಲಿದ್ದ ಸುಮಾರು 15,000 ರೂಪಾಯಿ ಬೆಲೆ ಬಾಳುವ ಮರಳಿನ ಜತೆಗೆ ಚಾಲಕ ಶಿವಮೊಗ್ಗ ಮೂಲದ ಮೃತ್ಯುಂಜಯ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಚಾಲಕ ಮತ್ತು ವಾಹನದ ಮಾಲಕ ಪಡುಬಿದ್ರಿ ನಿವಾಸಿ ಮಯ್ಯದ್ದಿ ಹುಸೇನ್ ಎಂಬಾತನ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…