ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಪು ಕ್ರೈಂ ಎಸ್ಸೈ ರಮೇಶ ನಾಯ್ಕ ಅವರು ಮಂಗಳವಾರ ಮುಂಜಾನೆ ರಾತ್ರಿ ರೌಂಡ್ಸ್ನಲ್ಲಿದ್ದಾಗ ಉಡುಪಿ ಕಡೆಗೆ ಬರುತ್ತಿದ್ದ ಟಿಪ್ಪರ್ನ ಬಾಡಿಯಿಂದ ನೀರು ಇಳಿಯುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿ ಮರಳನ್ನು ಸಾಗಿಸುತ್ತಿರಬಹುದು ಎಂಬ ಅನುಮಾನದಿಂದ ಟಿಪ್ಪರ್ನ ಚಾಲಕನಲ್ಲಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದಾಗ ಚಾಲಕನು ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದನು. ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಬಾಡಿಯ ಮಟ್ಟದವರೆಗೆ ಮರಳನ್ನು ತುಂಬಿಸಿರುವುದು, ಆ ಮರಳಿನಿಂದ ನೀರು ಇಳಿಯುತ್ತಿರುವುದು ಕಂಡು ಬಂದಿತ್ತು.
ಟಿಪ್ಪರ್ ಮತ್ತು ಅದರಲ್ಲಿದ್ದ ಸುಮಾರು 15,000 ರೂಪಾಯಿ ಬೆಲೆ ಬಾಳುವ ಮರಳಿನ ಜತೆಗೆ ಚಾಲಕ ಶಿವಮೊಗ್ಗ ಮೂಲದ ಮೃತ್ಯುಂಜಯ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಚಾಲಕ ಮತ್ತು ವಾಹನದ ಮಾಲಕ ಪಡುಬಿದ್ರಿ ನಿವಾಸಿ ಮಯ್ಯದ್ದಿ ಹುಸೇನ್ ಎಂಬಾತನ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…