ಕಾಪು: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ಧು ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಹುನ್ನಾರವನ್ನು ಖಂಡಿಸಿ, ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ ಆ. 21 ರಂದು ಬೆಳಿಗ್ಗೆ 10 ಗಂಟೆಗೆ ಕಂಚಿನಡ್ಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಕಾಪು ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಪ್ರತಿಭಟನೆಯ ಬಳಿಕ ಆ.22 ರಂದು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ವಿವಿಧ ಸಚಿವರನ್ನೊಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಬಳಿ ತೆರಳಿ ಮನವಿ ಸಲ್ಲಿಸಲಾಗುವುದು ಎಂದರು.
ಪ್ರತಿಭಟನೆಗೆ ಸಾರ್ವಜನಿಕರ ಸಹಿತವಾಗಿ ಕಾಪು ಬ್ಲಾಕ್ ಕಾಂಗ್ರೆಸ್ ನ ದಕ್ಷಿಣ ಮತ್ತು ಉತ್ತರ ವಿಭಾಗ, ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲೆಯ ಎಲ್ಲಾ ಬ್ಲಾಕ್ ಗಳ ಸಹಭಾಗಿತ್ವದೊಂದಿಗೆ ಈ ಪ್ರತಿಭಟನೆ ನಡೆಯಲಿದ್ದು ಈ ಮೂಲಕ ಸರಕಾರಕ್ಕೆ ಒತ್ತಡ ತರುವ ಪ್ರಯತ್ನ ನಡೆಸಲಾಗುವುದು ಎಂದರು.
ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯ ಶೇ.80 ರಷ್ಟು ರಸ್ತೆಯು ಕಾರ್ಕಳ ಭಾಗಕ್ಕೆ ಸೇರಿದೆ. ಯಡಿಯೂರಪ್ಪ ಸರಕಾರ ಇರುವಾಗ ಆರಂಭಗೊಂಡ ಪ್ರಕ್ರಿಯೆ ಇದಾಗಿದ್ದು ಬೆಳ್ಮಣ್ ನಲ್ಲಿ ಟೋಲ್ ಹೋರಾಟಗಾರರ ಪ್ರತಿಭಟನೆಗೆ ಮಣಿದು ಬೊಮ್ಮಾಯಿ ಸರಕಾರ ಅದನ್ನು ಕಂಚಿನಡ್ಕಕ್ಕೆ ರವಾನಿಸಿದೆ. ಈಗ ಇಲ್ಲಿಂದಲೇ ಓಡಿಸುವ ಉದ್ದೇಶಕ್ಕಾಗಿ ಈ ಹೋರಾಟ ನಡೆಯಲಿದೆ ಎಂದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…