ಕಾಪು : ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಬುಧವಾರ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ.
ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ವ್ಯಕ್ತಿ.
ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ ವಾಪಸ್ಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ.
ಟ್ಯೂಬ್ ಮಗುಚಿ ಸಮುದ್ರ ಪಾಲಾದ ಸುದ್ದಿ ತಿಳಿಯುತ್ತಲೇ ಸ್ಥಳೀಯರು ಅವರ ಸಹಾಯಕ್ಕೆ ಧಾವಿಸಿದ್ದು, ಅಷ್ಟರೊಳಗೆ ಸಮುದ್ರ ಪಾಲಾಗಿ ಬಿಟ್ಡಿದ್ದರು.
ಬಳಿಕ ಮೀನುಗಾರರು ಮತ್ತು ಪೊಲೀಸರ ಮನವಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಸಂಗಡಿಗರು ಸಮುದ್ರದಲ್ಲಿ ಮುಳುಗಿರುವ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದು ರಾತ್ರಿಯವರೆಗೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…