ಕಾಪು : ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಬುಧವಾರ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ.
ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ವ್ಯಕ್ತಿ.
ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ ವಾಪಸ್ಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ.
ಟ್ಯೂಬ್ ಮಗುಚಿ ಸಮುದ್ರ ಪಾಲಾದ ಸುದ್ದಿ ತಿಳಿಯುತ್ತಲೇ ಸ್ಥಳೀಯರು ಅವರ ಸಹಾಯಕ್ಕೆ ಧಾವಿಸಿದ್ದು, ಅಷ್ಟರೊಳಗೆ ಸಮುದ್ರ ಪಾಲಾಗಿ ಬಿಟ್ಡಿದ್ದರು.
ಬಳಿಕ ಮೀನುಗಾರರು ಮತ್ತು ಪೊಲೀಸರ ಮನವಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಸಂಗಡಿಗರು ಸಮುದ್ರದಲ್ಲಿ ಮುಳುಗಿರುವ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದು ರಾತ್ರಿಯವರೆಗೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…