Featured

ಕಾಪು : ಡಿ.16,17,18ರಂದು ಕಡಲ ಐಸಿರ ಬೀಚ್ ಫೆಸ್ಟ್ – 2022 :- Vishwanews24

ಕಾಪು : ಡಿ.16,17,18ರಂದು ಕಡಲ ಐಸಿರ ಬೀಚ್ ಫೆಸ್ಟ್ -2022

ಕಾಪು: ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ – 2022 ನಡೆಯಲಿದೆ .

ಕಡಲ ಐಸಿರ ಕಾರ್ಯಕ್ರಮದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ, ನೂತನ ಶಾಲಾ ವಾಹನ ಖರೀದಿ, ಸಂಸ್ಥೆಗೆ ನೂತನ ಕಟ್ಟಡ ನಿರ್ಮಾಣ ಹಾಗೂ ಇತರ ಸಮಾಜ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಡಿ. 16 ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಲಾ ವಾರ್ಷಿಕೋತ್ಸವ ನಡೆಯಲಿದೆ. ಡಿ.17 ರಂದು ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ, ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ವರ್ಧೆ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಮಹಿಳೆಯರಿಗಾಗಿ ಸಂಗೀತ ಕುರ್ಚಿ, ಬಾಳೆ ಹಣ್ಣು ತಿನ್ನುವುದು, ಬಾಟಲ್ ಬ್ಯಾಲೆನ್ಸ್ ಸ್ಪರ್ಧೆ ಮತ್ತು ತ್ರೋಬಾಲ್ ಪಂದ್ಯಾಟ ನಡೆಯಲಿದೆ.

ಡಿ. 18 ರಂದು ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಕೊಳಲು ಮತ್ತು ತಬಲ ತಂಡ ಸ್ಪರ್ಧೆ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ದೋಣಿ ಸ್ಪರ್ಧೆ, ಗಾಳಿ ಪಟ ಸ್ಪರ್ಧೆ ಮತ್ತು ಪ್ರದರ್ಶನ ನಡೆಯಲಿದೆ.

ವಿಶೇಷ ಆಕರ್ಷಣೆಯಾಗಿ ಕರಾವಳಿ ಶೈಲಿಯ ಪುಡ್ ಪೆಸ್ಟಿವಲ್, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಲಾವಿದರಿಂದ ಸಂಗೀತ ರಸಮಂಜರಿ, ವೈಶಿಷ್ಡ್ಯ ಪೂರ್ಣವಾಗಿ ಕಾಪು ದೀಪಸ್ತಂಭದ ಆವರಣದಲ್ಲಿ ಲೇಸರ್ ಶೋ, ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಲಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago